ಬೆಳಗಾವಿ:- ನನ್ನ ರಾಜೀನಾಮೆ ಕೇಳುವ ನೈತಿಕತೆ ವಿಜಯೇಂದ್ರಗೆ ಏನಿದೆ!? ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಜಗದೀಶ್ ಕ್ಯಾಪ್ಟನ್ ಆದ್ರೆ ಬಿಗ್ ಬಾಸ್ ಮನೆ ಹೇಗಿರುತ್ತೆ!? ಕಿಚ್ಚನ ಪ್ರಶ್ನೆಗೆ ಭಯದಲ್ಲೇ ಉತ್ತರಿಸಿದ ಧನರಾಜ್!
ದಸರಾ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಿದ್ದರು. ದಸರಾ ಮಗಿಯಿತು. ನಾನು ರಾಜೀನಾಮೆ ಕೊಟ್ಟನಾ? ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ? ಪೋಕ್ಸೋ ಕೇಸ್ನಲ್ಲಿ ಅವರ ತಂದೆ ಯಡಿಯೂರಪ್ಪ ಬೇಲ್ ಮೇಲೆ ಹೊರಗೆ ಇದ್ದಾರೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ನಮ್ಮ ಬೇಡಿಕೆಗೆ ತಕ್ಕಷ್ಟು ತೆರಿಗೆ ಹಣ ನೀಡಿಲ್ಲ, ಬದಲಾಗಿ ಕಡಿಮೆ ನೀಡಿದೆ. ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬಂಧ ಕರ್ನಾಟಕ ಜನರು, ಧ್ವನಿ ಎತ್ತಬೇಕು. ಅನ್ಯಾಯಕ್ಕೆ ಒಳಗಾದ ರಾಜ್ಯಗಳೂ ಕೂಡ ಧ್ವನಿ ಎತ್ತಬೇಕು. ಒಕ್ಕೂಟ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಯುತ ಪಾಲು ಕೊಟ್ಟರೆ ನಮಗೆ ಅನುಕೂಲ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ. ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರವನ್ನು ಕೇಳುತ್ತಿಲ್ಲ. ಕೋಮುವಾದಿ ವಿಚಾರದಲ್ಲಿ ಮಾತ್ರ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಾರೆ ಎಂದು ಲೇವಡಿ ಮಾಡಿದರು