ಹುಬ್ಬಳ್ಳಿ:- ಕಾಂಗ್ರೆಸ್ ಪಕ್ಷವನ್ನು ಭಯೋತ್ಪಾದಕರು ಎಂದು ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿಜವಾದ ಭಯೋತ್ಪಾದಕರು ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.
ನನ್ನ ರಾಜೀನಾಮೆ ಕೇಳುವ ನೈತಿಕತೆ ವಿಜಯೇಂದ್ರಗೆ ಏನಿದೆ!? ಸಿಎಂ ಸಿದ್ದರಾಮಯ್ಯ!
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಸುಳ್ಳು, ನಿರಾಧಾರ ವಿಚಾರಗಳ ಮೇಲೆ ಪ್ರತಿಭಟನೆ ಮಾಡುತ್ತಾರೆ ಎಂದರು.
ಹಳೇಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 42 ಪ್ರಕರಣವನ್ನು ವಾಪಾಸ್ ಪಡೆದ ವಿಚಾರಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಇದಕ್ಕಾಗಿಯೇ ಸಂಪುಟ ಖಾತೆಯ ಉಪಸಮಿತಿ ರಚನೆ ಮಾಡಲಾಗಿರುತ್ತದೆ. ಅದು ಸಲ್ಲಿಸಿದ ವರದಿ ಆಧರಿಸಿ ನಾವು 42 ಪ್ರಕರಣಗಳನ್ನು ವಾಪಾಸ್ ಪಡೆದುಕೊಂಡಿದ್ದೇವೆ. ಈ ಎಲ್ಲ ಪ್ರಕರಣಗಳು ನಂತರ ಕೋರ್ಟ್’ಗೆ ಹೋಗುತ್ತದೆ. ಅಲ್ಲಿ ಅನುಮತಿ ಬಂದ ನಂತರ ವಾಪಾಸ್ ಪಡೆಯಲು ಸಾಧ್ಯ. ಇಲ್ಲದೇ ಹೋದಲ್ಲಿ ವಾಪಾಸ್ ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಳೇಹುಬ್ಬಳ್ಳಿ ಗಲಭೆ ಕೇಸ್ ಜೊತೆಗೆ ಇದೇ ತರಹದ ವಿವಿಧ ಪ್ರಕರಣಗಳನ್ನು ಸಹ ವಾಪಾಸ್ ಪಡೆದಿದ್ದೇವೆ ಎಂದು ತಿಳಿಸಿದರು.