ಧಾರವಾಡ: ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಉಂಟಾಗಿರುವ ಚಂಡಮಾರುತ ಮತ್ತು ಅರಬ್ಬಿ ಸುಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಸುರಿದ ಭಾರಿ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ಗ್ರಾಮಸ್ಥರು ಹಗ್ಗದ ಸಹಾಯದಿಂದ ಕೊಚ್ಚಿ ಹೋದ ಸೇತುವೆಯನ್ನು ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ಧಾರವಾಡ ಜಿಲ್ಲೆಯ ಆಳ್ನಾವರ ತಾಲೂಕಿನ ಬೆಣಚಿ ಮತ್ತು ಬಾಲಗೇರಿ ಗ್ರಾಮದ ಮಧ್ಯ ಇರುವ ಸೇತುವೆ ಇದಾಗಿದೆ. ಸದ್ಯ ಸೇತುವೆ ಕೊಚ್ಚಿಹೋಗಿರೋದರಿಂದ ಬೆಣಚಿ ಮತ್ತು ಬಾಲಗೇರಿ ಗ್ರಾಮದ ಸಂಪರ್ಕ ಸ್ಥಗಿತಗೊಂಡಿದೆ. ಕಳೆದ 2019ರ ಪ್ರವಾಹದಲ್ಲಿ ಸೇತುವೆ ಅರ್ಧ ಕೊಚ್ಚಿ ಹೋಗಿತ್ತು. ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಸಚಿವ ಸಂತೋಷ ಲಾಡ್ಗೆ ಮನವಿ ಸಲ್ಲಿಸಿದ್ದರು. ಕಳೆದ 4 ದಿನಗಳಿಂದ ಸುರಿದ ಮಳೆಗೆ ಪೂರ್ತಿಯಾಗಿ ಸೇತುವೆ ಕೊಚ್ಚಿಹೋಗಿದೆ.