ಬೆಳಗಾವಿ: ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಹೊಸ ಸಿಎಂ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ದಸರಾ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಿದ್ದರು. ದಸರಾ ಮಗಿಯಿತು. ನಾನು ರಾಜೀನಾಮೆ ಕೊಟ್ಟನಾ? ವಿಜಯೇಂದ್ರಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಏನಿದೆ? ಪೋಕ್ಸೋ ಕೇಸ್ನಲ್ಲಿ ಅವರ ತಂದೆ ಯಡಿಯೂರಪ್ಪ ಬೇಲ್ ಮೇಲೆ ಹೊರಗೆ ಇದ್ದಾರೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದರು.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ನಮ್ಮ ಬೇಡಿಕೆಗೆ ತಕ್ಕಷ್ಟು ತೆರಿಗೆ ಹಣ ನೀಡಿಲ್ಲ, ಬದಲಾಗಿ ಕಡಿಮೆ ನೀಡಿದೆ. ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬಂಧ ಕರ್ನಾಟಕ ಜನರು, ಧ್ವನಿ ಎತ್ತಬೇಕು. ಅನ್ಯಾಯಕ್ಕೆ ಒಳಗಾದ ರಾಜ್ಯಗಳೂ ಕೂಡ ಧ್ವನಿ ಎತ್ತಬೇಕು. ಒಕ್ಕೂಟ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಯುತ ಪಾಲು ಕೊಟ್ಟರೆ ನಮಗೆ ಅನುಕೂಲ ಎಂದರು.