ಕಲಬುರಗಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿಬಂಧಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಸಿಕ್ಕ ರಾಜಾತಿಥ್ಯ ಪ್ರಕರಣ ಬೆನ್ನಲ್ಲೇ ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ಹೈಫೈ ಜೀವನ ನಡೆಸುತ್ತಿರುವ ಹಲವು ಫೋಟೊ ಹಾಗೂ ವಿಡಿಯೋ ತುಣುಕುಗಳು ವೈರಲ್ ಆಗಿವೆ.
ಇಲ್ಲಿ ಹಣ ಕೊಟ್ಟರೆ ಸ್ಮಾರ್ಟ್ ಫೋನ್, ಗಾಂಜಾ ಸೇರಿದಂತೆ ಕೈದಿಗಳಿಗೆ ರಾಜ್ಯಾತಿಥ್ಯ ಸಿಗುತ್ತಿದೆ ಎಂಬ ಮಾತು ಕೇಳಿ ಬಂದಿದೆ.ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿರುವ ಆರೋಪಿಗಳಾದ ವಿಶಾಲ್, ಸಾಗರ್ ಹಾಗೂ ಸೋನು ಎಂಬ ಕೈದಿಗಳ ಹೈಫೈ ಲೈಫ್ ಅನಾವರಣಗೊಂಡಿದೆ.
ಕೊತ್ತಂಬರಿ ಸೊಪ್ಪು ಬೇಗ ಕೊಳೆತು ಹೋಗುತ್ತಾ..? ಹೀಗಿಡಿ ಯಾವಾಗ್ಲೂ ಫ್ರೆಶ್ ಆಗಿರುತ್ತೆ!
ಸ್ಮಾರ್ಟ್ ಫೋನ್ ಬಳಸಿ ಸ್ನೇಹಿತರಿಗೆ ಕೈದಿಗಳ ವಿಡಿಯೋ ಕಾಲ್, ಗಾಂಜಾ ಸೇದುತ್ತಾ ಜೈಲಿನಲ್ಲಿ ಸೆಲ್ಫಿಗೆ ಪೋಸ್ ನೀಡುತ್ತಿರುವ ಕೈದಿಗಳ ವಿಡಿಯೋ ಬಹಿರಂಗವಾಗಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನಗೆ ರಾಜಾತಿಥ್ಯ ಪ್ರಕರಣ ಹಿನ್ನೆಲೆ ದರ್ಶನ್ ಆಪ್ತ ಸಹಾಯಕ ನಾಗರಾಜ್ ಕಲಬುರಗಿ ಜೈಲಿಗೆ ಶಿಫ್ಟ್ ಆಗಿದ್ದು, ನಾಗರಾಜ್ಗೆ ಕಲಬುರಗಿ ಕೇಂದ್ರಿಯ ಕಾರಾಗೃಹದಲ್ಲಿ ಹೈಫೈ ರಾಜಾತಿಥ್ಯ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ.