ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
DRDO Recruitment: ಈ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ – ಕೈ ತುಂಬಾ ಸಂಬಳ
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು, ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.