ಹಾಸನ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಸಕಲೇಶಪುರ ತಾಲ್ಲೂಕಿನ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ನಡೆದಿದೆ. ಕಾಡಾನೆಗೆ ಅಂದಾಜು 25 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.
ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರ್ತಾ ಇದ್ಯಾ..? ಹೀಗೆ ಮಾಡಿ ನಿವಾರಣೆಯಾಗುತ್ತೆ
ಈ ಆನೆ ಆಹಾರ ಅರಸಿ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಬಂದಿದೆ. ಈ ವೇಳೆ ಅಲ್ಲೇ ಹಾದು ಹೋಗಿರುವ ವಿದ್ಯುತ್ ತಂತಿ ಆನೆಗೆ ತಾಕಿದ್ದು, ಸ್ಥಳದಲ್ಲೇ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.