ಶ್ರೀನಿವಾಸಪುರ : ಅರಣ್ಯ ಇಲಾಖೆ ಸಸಿಗಳನ್ನು ನೆಡುವ ವಿಚಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತರ ನಡುವೆ ತಲ್ಲಾಟ ನೂಕಾಟವಾಗಿದೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು
ಅರಣ್ಯ ಭೂಮಿ ಒತ್ತುವರಿ ಜಾಗವೆಂದು ತೆರವು ಮಾಡಿದ್ದ ಸ್ಥಳದಲ್ಲಿ ಸಸಿ ನೆಡಲು ಅರಣ್ಯ ಇಲಾಖೆ ಮುಂದಾಗಿದ್ದು
ರೈತರ ಭೂಮಿಯಲ್ಲಿ ಸಸಿ ನೆಡಲು ಬಿಡುವದಿಲ್ಲವೆಂದು ಅರಣ್ಯ ಇಲಾಖೆಗೆ ದಿಕ್ಕಾರ ಕೂಗಿ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ನೂಕಾಟ ತಲ್ಲಾಟ ನಡೆದಿದ್ದು ವೃದ್ದೆ ಯೋರ್ವಳು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ,
ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.