ಬೆಂಗಳೂರು:-ಕರ್ನಾಟಕ ಸರ್ಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿ ಭ್ರಷ್ಟಾಚಾರ ಕೇಸ್ ಗಳು ಹೊರ ಬರುತ್ತಿವೆ. ಇಷ್ಟು ದಿನ ಮುಡಾ, ವಾಲ್ಮೀಕಿ ಹಗರಣಗಳ ಸುದ್ದಿ ಜೋರಾಗಿತ್ತು. ಇದೀಗ ಮತ್ತೊಂದು ಹಗರಣ ಬಟಾ ಬಯಲಾಗಿದೆ.
ಕರ್ನಾಟಕ ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ.
ಎಸ್, ಸೊಸೈಟಿಯಲ್ಲಿ ಬರೋಬ್ಬರಿ 19.34 ಕೋಟಿ ರೂ, ಹಣ ಅಕ್ರಮ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಸೊಸೈಟಿಯ ಪ್ರಭಾರಿ ಸಿಇಒ ಸೇರಿ 6 ಒಟ್ಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಹಕಾರ ಸಚಿವ ಕೆಎನ್ ರಾಜಣ್ಣ ಸಭೆ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. 2017ರಿಂದ 2023ರ ವರೆಗೆ ಸೊಸೈಟಿಯಲ್ಲಿ FD ರೂಪದಲ್ಲಿದ್ದ 19.34 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಳ್ಳಲಾಗಿದೆ.
ಸೊಸೈಟಿಯ ಪ್ರಭಾರ ಸಿಇಒ ಆಶಾಲತಾ ಪತಿ ಸೋಮಶೇಖರ್ ಸೇರಿ ಖಾಸಗಿಯವರ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಬಳಿಕ 101 FDಡಿ ಖಾತೆಗಳ ನಕಲಿ ಠೇವಣಿ ಬಾಂಡ್ ಸೃಷ್ಟಿಸಿದ್ದಾರೆ. ಈ ಮೂಲಕ ಅಕ್ರಮ ಮುಚ್ಚಿಡಲು ನಕಲಿ ಖಾತೆ ಸೃಷ್ಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸಹಕಾರ ಸಚಿವ ರಾಜಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆದಾಗ ವಂಚನೆ ಬೆಳಕಿಗೆ ಬಂದಿದ್ದು, ಆಶಾಲತಾ ಅವರು ಸೊಸೈಟಿ ಹಣವನ್ನು BDCC, ಅಪೆಕ್ಸ್ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವುದಾಗಿ ಹೇಳಿದ್ದಾರೆ. ಆದರೆ ಪರಿಶೀಲನೆ ವೇಳೆ ಹಣ ವರ್ಗಾವಣೆ, ನಕಲಿ ಠೇವಣಿ ಬಾಂಡ್ ಗಳ ಸೃಷ್ಟಿ ಬೆಳಕಿಗೆ ಬಂದಿದೆ.
ಸದ್ಯ ಸೊಸೈಟಿಯ ಅಧ್ಯಕ್ಷ ರಾಜು ಎಂಬುವರು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.