ಹಾವೇರಿ: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿಮಳೆಯಾಗುತ್ತಿದೆ. ಇದರಿಂದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಬೆಳೆದ ರೈತರ ಪರಿಸ್ಥಿತಿಯಂತೂ ತೀರ ಹದಗೆಟ್ಟಿದೆ. ಗ್ರಾಮದ ಶಿವನಗೌಡ ಸೊಲಬಗೌಡ್ರ ಎಂಬ ರೈತ ತಮ್ಮ ಮೂರು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದಿದ್ದು, ಭರ್ಜರಿ ಫಸಲು ಕೂಡ ಬಂದಿತ್ತು. ಮೆಕ್ಕೆಜೋಳ ಕಟಾವು ಮಾಡಿ ರಾಶಿ ಮಾಡಲು ಗುಡ್ಡೆ ಹಾಕಿದ್ದರು.
ಆದರೆ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ಮೆಕ್ಕೆಜೋಳ ಗುಡ್ಡೆ ಹಾಕಿದಲ್ಲೇ ಮೊಳಕೆ ಒಡೆಯುತ್ತಿದೆ. ಜಿಲ್ಲೆಯಲ್ಲಿ ಶೇ.80ರಷ್ಟು ರೈತರು ಮೆಕ್ಕೆಜೋಳ ಬೆಳೆಯುತ್ತಾರೆ. ನಿರಂತರ ಮಳೆಗೆ ಅನ್ನದಾತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳದ ತೆನೆಗಳು ಮೊಳಕೆಯೊಡೆದು ಹಾಳಾಗಿವೆ.
ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರುತ್ತಿದೆಯೇ..? ಹಾಗಾದ್ರೆ ಈ ಕಾಯಿಲೆಗಳ ಸೂಚನೆ ಇರಬಹುದು.!
ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ತೆನೆಗಳಲ್ಲಿ ಬಹುತೇಕ ತೆನೆಗಳು ಮೊಳಕೆಯಿಡೆದು ಹಾಳಾಗಿವೆ. ಇದು ರೈತರನ್ನು ಅಕ್ಷರಶಃ ಕಂಗಾಲಾಗಿಸಿದೆ. ಸುಮಾರು ಎರಡು ಲಕ್ಷ ರೂ. ಅಧಿಕ ಮೌಲ್ಯದ ಮೆಕ್ಕೆಜೋಳದ ಫಸಲು ಹಾಳಾಗಿದ್ದು, ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.