ಶಿವಮೊಗ್ಗ:- ಜಾತಿ ಗಣತಿ ಜಾರಿ ಬಗ್ಗೆ ವಿಶ್ವಪ್ರಸನ್ನ ತೀರ್ಥ ಶ್ರೀ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಚನ್ನಪಟ್ಟಣ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ: ಆರ್ ಅಶೋಕ್ ಶಾಕಿಂಗ್ ಹೇಳಿಕೆ!
ಈ ಸಂಬಂಧ ಮಾತನಾಡಿದ ಅವರು,ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು? ಎಂದರು.
ಒಂದು ಕಡೆ ಜಾತಿ ಆಧಾರದಲ್ಲಿ ರಾಜೀಕಿಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೇ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದಾರೆ.
ನಾನು ಅಯೋಧ್ಯೆಗೆ ಹೋಗಿ ಬಂದಿದ್ದು, ಅನೇಕ ಜನ ಭಕ್ತರು ರಾಮತಾರಕ ಹೋಮ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರದ ಉಳಿದ ಕಾರ್ಯ ಭರದಿಂದ ನಡೆಯುತ್ತಿದೆ. ಇನ್ನೂ ಒಂದು ವರ್ಷದಲ್ಲಿ ಶ್ರೀರಾಮ ಮಂದಿರ ಪೂರ್ಣವಾಗಲಿದೆ. ರಾಮರಾಜ್ಯದ ಸ್ಥಾಪನೆಗಾಗಿ ನಮಗೆ ರಾಮ ಮಂದಿರ ಬೇಕು. ಇವತ್ತು ಪ್ರಜಾರಾಜ್ಯ ಇದೆ ಆದರೂ ರಾಮರಾಜ್ಯ ಹೇಗೆ ಎಂದರೆ ರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ನಮ್ಮ ಸುತ್ತಮುತ್ತಲಲ್ಲಿ ಇರುವ ದುಃಖಿತರಿಗೆ ಸೇವೆ ಮಾಡುವುದೇ ರಾಮನ ಸೇವೆ ಆಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.