ಬೆಂಗಳೂರು:- ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಫರ್ ಬಂದಿರುವ ವಿಚಾರವಾಗಿ CP ಯೋಗೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಕಲಿ ದಾಖಲೆ ಕೊಟ್ಟು BPL ಕಾರ್ಡ್ ಪಡೆದಿದ್ದೀರಾ!? ಹುಷಾರ್, ರದ್ದಾಗುತ್ತೆ ರೇಷನ್!
ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲ ಅಂದ್ರೆ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದಿದ್ದಾರೆ.
ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ಬಿಜೆಪಿಯಿಂದಲೇ ಅವರಿಗೆ ಟಿಕೆಟ್ ದೊರೆಯುತ್ತದೆಯೇ? ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ? ಅಥವಾ ಕಾಂಗ್ರೆಸ್ ಸೇರುತ್ತಾರಾ ಎಂಬ ಕುತೂಹಲ ಇದೆ.
ಯೋಗೇಶ್ವರ್ಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಫರ್ ನೀಡಿದ್ದರು. ಆದರೆ, ಅದನ್ನು ಯೋಗೇಶ್ವರ್ ತಿರಸ್ಕರಿಸಿದ್ದಾರೆ. ಹೀಗಾಗಿ ಯೋಗೇಶ್ವರ್ ಮುಂದಿನ ನಡೆ ಕುತೂಹಲ ಕೆರಳಿಸಿದೆ.