ದೇವನಹಳ್ಳಿ:ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರಗಳು ನಡೆದಿದೆ.
ಅದರಂತೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಬಚಾವ್ ಆಗಿರುವ ಘಟನೆ ದೇವನಹಳ್ಳಿಯ ದೊಡ್ಡ ಸಾಗರದಲ್ಲಿ ಘಟನೆ ಜರುಗಿದೆ.
ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿ ವೆಂಕಟೇಶ್ ಎಂಬವರನ್ನು ಸಿನಿಮೀಯ ರೀತಿಯಲ್ಲಿ ಸ್ಥಳೀಯರು ರಕ್ಷಿಸಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಗಾರೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೆಂಕಟೇಶ್, ಮಳೆ ನೀರಿನ ರಭಸಕ್ಕೆ ನಿಲ್ಲಲಾಗದೇ ಜಾರಿ ಚರಂಡಿಗೆ ಬಿದ್ದಿದ್ದಾರೆ.
ಅರ್ಧ ಕಿಲೋ ಮೀಟರ್ ಕೊಚ್ಚಿಕೊಂಡು ಹೋಗಿದ್ದಾರೆ. ನಂತರ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಚಾವ್ ಆಗಿದ್ದಾರೆ.