ಬೀದರ್ :- ಜಿಲ್ಲೆಯ ವಿದ್ಯಾನಗರದಲ್ಲಿ ಮನೆಗೆ ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ.
ನಡುರಸ್ತೆಯಲ್ಲಿ ನಿಂತು ಬಿಬಿಎಂಪಿ ಅಧಿಕಾರಿಗಳ ಮುಖವಾಡ ಕಳಚಿದ ಲಾಯರ್ ಜಗದೀಶ್!
ಮಂದಕನಹಳ್ಳಿ ಗ್ರಾಮದ 24 ವರ್ಷದ ಇಮಾವೇಲ್ ಎಂದು ಗುರುತಿಸಲಾಗಿದೆ. ಯುವಕ ಮೂರನೇ ಮಹಡಿಗೆ ಹೋಗುವುದಿಲ್ಲ ಎಂದು ಹೇಳಿದ್ದರೂ ಕೂಡ ಒತ್ತಾಯ ಪೂರ್ವಕವಾಗಿ ಕಳುಹಿಸಿದ್ದಾರೆ. ಬಳಿಕ ಆತ ಪೇಟಿಂಗ್ ಮಾಡುವಾಗ ಮನೆಯ ಮಾಲೀಕ, ಗುತ್ತಿಗೆದಾರ ಹಾಗೂ ಎಂಜಿನಿಯರ್ ಸೇರಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮರಣೋತ್ತರ ಪರೀಕ್ಷೆ ವೇಳೆ ಶವವನ್ನು ನೋಡಲು ಒಳಗಡೆ ಬಿಡಿ ಎಂದು ಕುಟುಂಬಸ್ಥರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿದೆ. ಈ ವೇಳೆ ಶವಾಗಾರದ ಸಿಬ್ಬಂದಿಯೊಂದಿಗೆ ಕೂಡ ಗಲಾಟೆ ಮಾಡಿಕೊಂಡಿದ್ದಾರೆ. ಮನೆಯ ಮಾಲೀಕ, ಗುತ್ತಿಗೆದಾರ ಹಾಗೂ ಎಂಜಿನಿಯರ್ನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.