ಕಲಬುರ್ಗಿ:- ಜಿಲ್ಲೆಯ ಅಜಾದಪುರದಲ್ಲಿ ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಜರುಗಿದೆ.
IND vs NZ: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಸ್ಪೋಟಕ ಬ್ಯಾಟರ್ ರೀ ಎಂಟ್ರಿ!
ಕೊಲೆಯಾದ ವ್ಯಕ್ತಿಯನ್ನು ಚಂದ್ರಕಾಂತ್ ಜಮಾದರ್ ಎಂದು ಗುರುತಿಸಲಾಗಿದೆ. ಚಂದ್ರಕಾಂತ್ ಮನೆ ಹಿತ್ತಲಿನಲ್ಲಿ ಹತ್ತು ಅಡಿ ಜಾಗ ಇತ್ತು. ಪಕ್ಕದ ಮನೆ ನಿವಾಸಿ ಮೌನೇಶ್ ಗುತ್ತೆದಾರ್ ಚಂದ್ರಕಾಂತ್ ಜೊತೆ ಆ ಜಾಗ ತಮಗೆ ಸೇರಬೇಕು ಎನ್ನುತ್ತಿದ್ದ. ಚಂದ್ರಕಾಂತ್ ಆ ಜಾಗ ತಮಗೆ ಸೇರಬೇಕು ಎಂದು ಹೇಳಿದ್ದ. ಹೀಗೆ ಜಾಗದ ವಿಚಾರವಾಗಿ ಇಬ್ಬರ ಮಧ್ಯೆ ಕಿರಿಕ್ ಆಗಿ ಜಗಳ ವಿಕೋಪಕಕ್ಕೆ ಹೋಗಿದ್ದು, ಚಂದ್ರಕಾಂತ್ನನ್ನು ಮೌನೇಶ್ ಗುತ್ತೆದಾರ್ ಹಾಗೂ ಕುಟುಂಬದವರು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ.