ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಯೋಜನೆಗಳಲ್ಲಿ ಮಹತ್ವದ ಯೋಜನೆಯಾದ ಅನ್ನಭಾಗ್ಯ ಯೋಜನೆ ಬಗ್ಗೆ ಆಹಾರ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಹೌದು ಡಿಬಿಟಿ ಬದಲಿಗೆ ಎಣ್ಣೆ, ಬೆಳೆಯನ್ನೊಳಗೊಂಡ ಆಹಾರ ಕಿಟ್ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಆಹಾರ ಕಿಟ್ ವಿತರಣೆ ಬಗ್ಗೆ ಅ.28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಮೂಲಕ ಡಿಬಿಟಿ ಬದಲಿಗೆ ಆಹಾರ ಕಿಟ್ ವಿತರಣೆ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಒಲವು ತೋರಿಸಿದ್ದಾರೆ.
ಕೇಂದ್ರ ಅಕ್ಕಿ ವಿತರಣೆಗೆ ಮುಂದಾದರೂ ಖರೀದಿಗೆ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಸದ್ಯ ಕೇಂದ್ರದಿಂದ ರಾಜ್ಯಕ್ಕೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ವಿತರಣೆ ಮಾಡುತ್ತಿದ್ದು, ಇದರ ಜೊತೆಗೆ ಮತ್ತೆ 5 ಕೆಜಿ ಸೇರಿಸಿ ಒಟ್ಟು 10 ಕೆ.ಜಿ ವಿತರಿಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ವಿತರಿಸಿದರೆ, ರಾಜ್ಯ ಸರ್ಕಾರ ಆಹಾರ ಕಿಟ್ ವಿತರಣೆಗೆ ಚಿಂತನೆ ನಡೆಸಿದೆ.
KPTCL Jobs 2024: SSLC ಪಾಸಾದವರಿಗೆ ಕರ್ನಾಟಕ ವಿದ್ಯುತ್ ನಿಗಮದಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಇಂದೇ ಅರ್ಜಿ ಸಲ್ಲಿಸಿ
ಇನ್ನು ಆಹಾರ ಕಿಟ್ ವಿತರಣೆ ಕುರಿತು ಸಚಿವ ಕೆ.ಹೆಚ್.ಮುನಿಯಪ್ಪ ಹೆಚ್ಚು ಒಲವು ಹೊಂದಿದ್ದು, ರೇಷನ್ ಕಾರ್ಡ್ಗಳ ಪರಿಷ್ಕರಣೆ ಮುಗಿದ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಅಕ್ಕಿ ಹಣ ನೀಡುವುದನ್ನು ನಿಲ್ಲಿಸಿ ಫುಡ್ ಕಿಟ್ ಕೊಡುವ ಬಗ್ಗೆ ಸರ್ಕಾರ ಈ ಹಿಂದೆ ಕೂಡ ಚಿಂತನೆ ಮಾಡಿತ್ತು. ಆದರೆ ಅನ್ನ ಭಾಗ್ಯ ಯೋಜನೆ ಸುಸೂತ್ರವಾಗಿ ಮುಂದುವರೆ ಹಿನ್ನೆಲೆ ಫುಡ್ ಕಿಟ್ ಕೊಡುವ ನಿರ್ಧಾರವನ್ನು ಸರ್ಕಾರ ಕೈಬಿಟ್ಟಿತ್ತು.