ಕಲಘಟಗಿ: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿ ಸೆಳವಿಗೆ ಕಾರು ಸಮೇತ ಸಿಲುಕಿದ್ದ ಚಾಲಕನನ್ನು ರಕ್ಷಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ.ಹಿರೇಹೊನ್ನಳ್ಳಿ-ಬೇಗೂರು ನಡುವೆ ನಡೆದ ಘಟನೆಯಾಗಿದ್ದು, ಎರಡೂ ಗ್ರಾಮಗಳ ನಡುವೆ ಹರಿಯುವ ಶಾಲ್ಮಲಾ ನದಿಯಲ್ಲಿ ಮಧ್ಯರಾತ್ರಿ ನಡೆದ ಘಟನೆಯಲ್ಲಿ ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ನಾಗರಾಜ ದೇಮಣ್ಣವರ
ಪದೇ, ಪದೇ ಮೂತ್ರ ವಿಸರ್ಜನೆ ಹೋಗ್ತಿದ್ರೆ ಜೋಪಾನ! ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣ
ಬೇಗೂರು ಗ್ರಾಮಕ್ಕೆ ತೆರಳುತ್ತಿದ್ದರು. ನೀರಿನ ರಭಸಕ್ಕೆ ಕಾರು ಸಮೇತ ಕೊಚ್ಚಿ ಹೋಗಿ ಅಪಾಯಕ್ಕೆ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಕೊಚ್ಚಿ ಹೋಗುವ ಸಮಯದಲ್ಲಿ ಕಾರಿನಿಂದ ಮರವೇರಿದ ಯುವಕ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಯುವಕನ ರಕ್ಷಣೆ ಮಾಡುವಲ್ಲಿ.ಯಶಸ್ವಿಯಾಗಿದ್ದಾರೆ
ವರದಿ: ಮಾರುತಿ ಲಮಾಣಿ