ಬೆಂಗಳೂರು:- ನಗರದಲ್ಲಿ ನಡೆದ ನಿರ್ಮಾಣ ಹಂತದ ಕಟ್ಟಡ ದುರಂತ ಕೇಸ್ ಗೆ ಸಂಬಧಪಟ್ಟಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.
ಉಪಚುನಾವಣೆ: ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್, ಅನ್ನಪೂರ್ಣ ತುಕಾರಾಂಗೆ “ಕೈ” ಟಿಕೆಟ್!
ಕಟ್ಟಡ ಮಾಲೀಕರಾದ ಮುನಿರೆಡ್ಡಿ, ಪುತ್ರ ಭುವನ್ ಹಾಗೂ ಗುತ್ತಿಗೆದಾರ ಮುನಿಯಪ್ಪ ಎನ್ನುವವರನ್ನ ಪೊಲೀಸರು ಬಂಧಿಸಿದ್ದಾರೆ. ಭಾರೀ ಮಳೆಗೆ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಬುಡಮೇಲಾಗಿ ಬಿದ್ದಿತು. ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಹಲವಾರು ಕಾರ್ಮಿಕರು ಅದರೊಳಗೆ ಸಿಲುಕಿಕೊಂಡಿದ್ದರು. ಅವರ ಪೈಕಿ 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉಳಿದವರ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಮೊಟೋ ಕೇಸ್ ದಾಖಲಿಸೋದಾಗಿ ತಿಳಿಸಿದ್ದಾರೆ. ಈ ಬೆನ್ನಲ್ಲೇ ಎಇಇ ವಿನಯ್ ಸಸ್ಪೆಂಡ್ ಆಗಿದ್ದಾರೆ.