ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಿಶೋರ್ ಅವರು 3,655 ಮತ ಪಡೆದರೆ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ 1,958 ಮತ ಗಳಿಸಿತು.
ಎಸ್ಡಿಪಿಐನ ಅನ್ವರ್ ಸಾದತ್ 195 ಮತ, ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿದರು. ಒಟ್ಟು 87 ಮತಗಳು ತಿರಸ್ಕೃತಗೊಂಡವು. ಚಲಾವಣೆಯಾದ ಒಟ್ಟು 5,907 ಮತಗಳ ಪೈಕಿ 5,819 ಸಿಂಧು ಮತಗಳಿದ್ದವು. ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಮತ ಎಣಿಕೆ ನಡೆಯಿತು.
DRDO CAIR Recruitment: ಎಂಜಿನಿಯರಿಂಗ್ ಮುಗಿಸಿದ್ರೂ ಕೆಲಸ ಸಿಗ್ತಿಲ್ವಾ.? ಇಲ್ಲಿದೆ ನೋಡಿ ಜಾಬ್ ಆಫರ್
ಚಿಕ್ಕಮಗಳೂರು-ಉಡುಪಿ ಲೋಕಸಭಾ ಸದಸ್ಯರಾಗಿ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನ ಭರ್ತಿಗಾಗಿ ಅ.21 ರಂದು ಉಪ ಚುನಾವಣೆ ನಡೆದಿತ್ತು. ಡಿಸೆಂಬರ್ 2021 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 3,672 ಮತ, ಮಂಜುನಾಥ ಭಂಡಾರಿ 2,079 ಮತ, ಎಸ್ಡಿಪಿಐ ಅಭ್ಯರ್ಥಿ 204 ಮತ ಪಡೆದಿದ್ದರು.