ಚಾಮರಾಜನಗರ:- 28 ದಿನಗಳ ಅವಧಿಯಲ್ಲಿ ಭಕ್ತರು ನೀಡಿದ ಕಾಣಿಕೆಯಿಂದ ಪವಾಡ ಪುರುಷ ಮಲೆಮಹದೇಶ್ವಬೆಟ್ಟದಲ್ಲಿರುವ ಮಾದಪ್ಪ 2 ಕೋಟಿ ಒಡೆಯನಾಗಿದ್ದಾರೆ.
ಗಾಳಿಪಟ ಪ್ರಿಯರ ಗಮನಕ್ಕೆ: ಪಟ ಹಾರಿಸುವ ದಾರ ಹತ್ತಿಯದ್ದೇ ಇರಬೇಕು, ನಿಯಮ ಉಲ್ಲಂಘಿಸಿದ್ರೆ ಕ್ರಮದ ಎಚ್ಚರಿಕೆ!
ಚಾಮರಾಜನಗರ ಜಿಲ್ಲೆಯ ಹನೂರುತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಪ್ರಕ್ರಿಯೆ ಜರುಗಿದ್ದು ಈ ಬಾರಿ 28 ದಿನಗಳ ಅವಧಿಯಲ್ಲಿ 2ಕೋಟಿ ರೂಪಾಯಿ ಸಂಗ್ರಹವಾಗಿದೆ.
ಈ ಕುರಿತು ಮಾಹಿತಿ ನೀಡಿದ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು, ”ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ದೇವರ ಹುಂಡಿಗಳನ್ನು ತೆರೆಯಲಾಯಿತು.
ಕಳೆದ 28 ದಿನಗಳಲ್ಲಿ ಒಟ್ಟು ಮೊತ್ತ ರೂ.2,00,80,844 ( ಎರಡು ಕೋಟಿ ಎಂಟು ಸಾವಿರದ ಎಂಟನೂರು ನಲವತ್ತ ನಾಲ್ಕು ರೂ) (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 30 ಗ್ರಾಂ, ಬೆಳ್ಳಿ
1ಕೆ.ಜಿ 865 ಗ್ರಾಂ ಹುಂಡಿಯಲ್ಲಿ ದೊರೆತಿದೆ ಎಂದು ತಿಳಿಸಿದ್ದಾರೆ
ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು. ಶ್ವೇತಾ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಭಾಗವಹಿಸಿದ್ದರು.