ಕಲಘಟಗಿ: ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಗ್ರಾಮದ ಎಪ್ಪತ್ತಕ್ಕೂ ಅಧಿಕ ಜನರು ವಾಂತಿಭೇದಿಯಿಂದ ಆಸ್ವಸ್ಥಗೊಂಡು ಇಂದು ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳಿಂದಲೂ ಗ್ರಾಮದ ಜನರು ವಾಂತಿಭೇದಿಯಿಂದ ಬಳಲುತ್ತಿದ್ದು, ಇಂದು ಸಾಯಂಕಾಲ ಹೆಚ್ಚಾದ ಕಾರಣ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳವೆ ಬಾವಿಯಿಂದ ನೀರಿನ ಟ್ಯಾಂಕ್ ಗೆ ನೀರನ್ನು ಸಂಗ್ರಹ ಮಾಡಿ ನಂತರ ಗ್ರಾಮಸ್ಥರಿಗೆ ನೀರು ಬಿಡಲಾಗುತ್ತದೆ.
ದೀಪಾವಳಿಗೆ Samsung ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಇಲ್ಲಿದೆ ಬೆಸ್ಟ್ ಆಫರ್!
ಆದರೆ, ಹಲವಾರು ವರ್ಷಗಳಿಂದ ನೀರಿನ ಟ್ಯಾಂಕ್ ನ್ನು ಸ್ವಚ್ಛತೆ ಮಾಡದೇ ಇರುವುದರಿಂದ ಈ ಸಮಸ್ಯೆ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ತಾಲೂಕು ಆಸ್ಪತ್ರೆಗೆ ತಹಶೀಲ್ದಾರ್ ಭೇಟಿ ನೀಡಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇಷ್ಟೆಲ್ಲ ಸಮಸ್ಯೆ ಆಗಿದ್ದರೂ ಸಂಬಂಧ ಪಟ್ಟ ಪಿಡಿಒ ಮಹಾಶಯ ಮಾತ್ರ ಆಸ್ಪತ್ರೆಗೆ ಭೇಟಿ ನೀಡದೇ ಇರೋದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ವರದಿ: ಮಾರುತಿ ಲಮಾಣಿ, ಕಲಘಟಗಿ