ಬೆಂಗಳೂರು: ನಿಖಿಲ್ ಸ್ಪರ್ಧೆ ಮಾಡದೆ ಇದ್ದಿದ್ದರೆ ಕುಮಾರಸ್ವಾಮಿ ಮಗ ಹೆದರಿ ಓಡಿ ಹೋದ ಅಂತಿದ್ದರು ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಎಂದೂ ಹಿಂಬಾಗಿಲಿನಿಂದ ರಾಜಕಾರಣಕ್ಕೆ ಬಂದಿಲ್ಲ. ಅಧಿಕಾರಕ್ಕೆ ಅಂಟಿ ಕೂರುವ ಕುಟುಂಬ ನಮ್ಮದಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಥಳೀಯರನ್ನೇ ನಿಲ್ಲಿಸ್ತೀವಿ ಅಂತಾ ಹೇಳಿದ್ವಿ.
ನಾವು ಯೋಗೇಶ್ವರ್ಗೆ ಕೊನೆ ಘಳಿಗೆವರೆಗೂ ಅವಕಾಶ ನೀಡಿದ್ವಿ. ಬಿಜೆಪಿಯಿಂದಲೇ ನಿಂತ್ಕಳಿ ಅಂತಾ ಹೇಳಿದ್ದೆವು. ಆದರೆ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ರು. ಕಾಂಗ್ರೆಸ್ಗೆ ಕ್ಯಾಂಡಿಡೇಟ್ ಇಲ್ಲದೆ ಗೋಗರೆದು ನಿಲ್ಲಿಸಿದ್ದಾರೆ. ದಮ್ಮಯ್ಯ, ದಕ್ಕಯ್ಯ ಅಂದು ಯೋಗೇಶ್ವರ್ ನಿಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
Stop Eating Rice: ಒಂದು ತಿಂಗಳು ಅನ್ನ ಸೇವಿಸದಿದ್ದರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ..?
ಅಧಿಕಾರಕ್ಕಾಗಿ ಯಾರ ಮುಂದೆ ಬೇಕಾದರೂ ಕೈಕಾಲಾದ್ರು ಕಟ್ಟುತ್ತಾರೆ. ದೇವೇಗೌಡ್ರು ಕುಟುಂಬ ನಾಶ ಮಾಡುವುದೊಂದೇ ಉದ್ದೇಶ. ನಿಖಿಲ್ ನಿಲ್ಲಿಸದಿದ್ರೆ ಕುಮಾರಸ್ವಾಮಿ ಮಗ ಹೆದರಿ ಹೋದ ಅಂತಾ ಹಬ್ಬಿಸುತ್ತಿದ್ರು. ನಿಖಿಲ್ ಪ್ರಾಮಾಣಿಕವಾಗಿ ಓಡಾಡ್ತಾನೆ, ಗೆಲ್ತಾನೆ. ಜೆಡಿಎಸ್ ಮುಗಿದೇ ಹೋಯ್ತು ಅಂದ್ರು, ಕುಮಾರಣ್ಣ ಕೇಂದ್ರ ಸಚಿವರಾಗಿಲ್ವ? ಇವರಾರಿಂದ ಮೈತ್ರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.
ಪ್ರತಿದಿನ ಕತ್ತಲೆ ಆಗುತ್ತೆ ಬೆಳಗಾಗುತ್ತೆ. ಕಾಲ ಚಕ್ರ ಹೀಗೆ ಇರುವುದಿಲ್ಲ. ನಿಖಿಲ್ ನಿಲ್ಲಿಸದಿದ್ರೆ ಕದ್ದು ಓಡಿ ಹೋದ ಅನ್ನುತ್ತಿದ್ರು. ಕಾಂಗ್ರೆಸ್ 14 ತಿಂಗಳ ಸರ್ಕಾರ ಅವರು ಆಗ ಹಾಸನಕ್ಕೆ ಬಂದು ಹಗಲು ರಾತ್ರಿ ಸುತ್ತಾಡಿದ್ರು. ಆದರೂ ಹಾಸನದಲ್ಲಿ ಎಂಎಲ್ಎ ಗೆಲ್ಲೋಕಾಯ್ತ? ಆರು ಸ್ಥಾನಗಳನ್ನ ನಾವು ಗೆಲ್ಲಲಿಲ್ವ? ಲೋಕಸಭೆಯಲ್ಲಿ ನಾಲ್ಕು ದಿನ ಇದ್ದಂತೆ ಏನು ಮಾಡಿದ್ರು ಮುಂದೆ ಹೇಳ್ತೇನೆ. ಕಾಲ ಬರುತ್ತೆ ಎಂದು ಹೇಳಿದ್ದಾರೆ.