ರಾಮನಗರ:- ದೇವೇಗೌಡರು ಯಮೋಷನಲ್ ಆಗಿ ಡ್ರಾಮ ಮಾಡ್ತಾರೆ ಎಂದು CP ಯೋಗೇಶ್ವರ್ ಹೇಳಿದ್ದಾರೆ.
ಸಿನಿಮಾ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್: ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಮನವಿ!
ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ ಎಂದರು. ಮೈತ್ರಿಯಾದ ಮೂರ್ನಾಲ್ಕು ತಿಂಗಳಲ್ಲೇ ಅವರ ಸಹವಾಸ ಸಾಕು ಅನ್ನಿಸಿತ್ತು. ಯೋಗೇಶ್ವರ್ ಹಾಗೂ ಡಿಕೆಶಿ ಇಬ್ಬರು ಮೊದಲೇ ಮಾತನಾಡಿಕೊಂಡಿದ್ದರು ಎಂದು ಹೇಳುತ್ತಿದ್ದರು. ಆದರೆ ನಾನು ಕೊನೆ ಕ್ಷಣದವರೆಗೂ ಟಿಕೆಟ್ಗಾಗಿ ಕಾದೆ. ಆಗಲಿಲ್ಲ. ಅದಕ್ಕಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾದೆ. ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿಗೆ ನಾನೇ ಕಾರಣನಾಗಿದ್ದೆ. ಈಗ ಅವರು ಎನ್ಡಿಎ ಲಾಭ ಪಡೆಯುತ್ತಿದ್ದರೆ ಅದಕ್ಕೆ ನಾನು ಕಾರಣ. ಅವರ ಭಾವ ಸಂಸದರಾಗಲು ನಾನು ಕಾರಣ ಎಂದರು
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದ್ರೂ ಅಭಿವೃದ್ಧಿ ಮಾಡಿಲ್ಲ. ರಾಜಕೀಯ ಸಿದ್ದಾಂತ ಏನೇ ಇರಬಹುದು, ಅಭಿವೃದ್ಧಿ ವಿಚಾರದಲ್ಲಿ ಒಂದೇಯಾಗಿರುತ್ತದೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಿಲ್ಲ. ಯಮೋಷನಲ್ ಆಗಿ ಜನರ ಹತ್ತಿರ ಬರುತ್ತಾರೆ. ಕಣ್ಣೀರು ಹಾಕುತ್ತಾರೆ, ಡ್ರಾಮ ಮಾಡುತ್ತಾರೆ. ದೇವೇಗೌಡರು ಬಂದೂ ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ. ಇದಕ್ಕೆಲ್ಲ ಜನರು ಮರುಳಾಗಬಾರದು ಎಂದರು.