ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸಭೆ ಬಳಿಕ ಮಾತನಾಡಿದ ಅವರು, ಕಾರ್ಯಕರ್ತರ ಒತ್ತಾಯದ ಮೇರೆಗೆ ಅಜ್ಜಂಪೀರ್ ಖಾದ್ರಿ ಪಕ್ಷೇತರವಾಗಿ ನಾಮಿನೇಷನ್ ಹಾಕಿದ್ದಾರೆ.
ನೀವು ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇಲ್ಲಿದೆ ನೋಡಿ ಬಂಪರ್ ಯೋಜನೆ! ಕಡಿಮೆ ಸಮಯ, ಹೆಚ್ಚು ಲಾಭ!
ಖಾದ್ರಿ ಅವರನ್ನ ನಾನೇ ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದೆ. ಕಳೆದ ಚುನಾವಣೆಯಲ್ಲಿ ಖಾದ್ರಿಗೆ ಟಿಕೆಟ್ ಕೊಡಬೇಕಿತ್ತು. ಈ ಬಾರಿಯೂ ಪಕ್ಷ ಪಠಾಣ್ಗೆ ಟಿಕೆಟ್ ಕೊಟ್ಟಿದೆ. ಖಾದ್ರಿ ಅವರಿಗೆ ನಾವು ಅಧಿಕಾರ ಕೊಡುತ್ತೇವೆ. ಖಾದ್ರಿ ಪ್ರಾಮಾಣಿಕ ವ್ಯಕ್ತಿ. ಸಿಎಂ ಕೂಡಾ ಮನವೊಲಿಕೆ ಮಾಡಿದ್ದಾರೆ. ನೀತಿ ಸಂಹಿತೆ ಇರುವುದರಿಂದ ಈಗ ಏನು ಹೇಳುವುದಕ್ಕೆ ಆಗುವುದಿಲ್ಲ. 30ನೇ ತಾರೀಕಿನಂದು ವಾಪಸ್ ಪಡೆಯುತ್ತಾರೆ. ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂದರು.