ಹುಬ್ಬಳ್ಳಿ: ಅನಾಥ ಮಕ್ಕಳಲ್ಲಿ ಆತ್ಮಸ್ಥೆರ್ಯ ಹೆಚ್ಚಿಸುವ ಸಪ್ಪೋಂ ಕೀ ಉಡಾನ್ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಯಿತು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಸಪ್ಪೋಂ ಕೀ ಉಡಾನ್ ಕಾರ್ಯಕ್ರಮದಡಿ ನಗರದ ಸೇವಾ ಭಾರತಿ ಟ್ರಸ್ಟ್ ನ ಅನಾಥ ಹಾಗೂ ನಿರ್ಗತಿಕ 15ಮಕ್ಕಳು ಹಾಗೂ ಇಬ್ಬರು ಮಾತೆಯರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದರು.
ಹುಬ್ಬಳ್ಳಿಯ ರೌಂಡ್ ಟೇಬಲ್-37ರ ಆಶ್ರಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದ ಪ್ರಾಯೋಕತ್ವವವನ್ನು ಪಾಲಿಕೆ ಮಾಜಿ ಮೇಯರ್ ವೀರಣ್ಣ ಸವಡಿ ಹಾಗೂ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ವಹಿಸಿದ್ದರು. ರೌಂಡ್ ಟೇಬಲ್-37ರ ಅಧ್ಯಕ್ಷೆ ಡಾ. ಅಪೂರ್ವಾ ಪಾಟೀಲ ಹಾಗೂ ಡಾ. ವಿವೇಕ ಪಾಟೀಲ ನೇತೃತ್ವವಹಿಸಿದ್ದರು.ಅನಾಥ ಮಕ್ಕಳು ಬೆಂಗಳೂರಿನ ನೆಹರು ಪ್ಲಾನೆಟ್ನಲ್ಲಿ ಬಾನುವಾರ ಆಯೋಜಿಸಿದ್ದ ವಿಜ್ಞಾನ ವಿಷಯ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಸೇವಾ ಭಾರತಿಯಲ್ಲಿ ಆಶ್ರಯ ಪಡೆದು ಸುಂದರ ಬದುಕಿನ ಕನಸು ಕಾಣುತ್ತಿರುವ ಅನಾಥ ಮಕ್ಕಳಲ್ಲಿ ಈ ಬಾನಂಗಳ ಹಾರಾಟ ಹೊಸ ಚೈತನ್ಯ, ಹುಮ್ಮಸ್ಸು ಮೂಡಿಸಿದಂತಾಯಿತು ಎಂದರೆ ತಪ್ಪಾಗಲಾರದು.
Passion Fruit Benefits: ಪ್ಯಾಶನ್ ಫ್ರೂಟ್ ಹಣ್ಣಿನ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ.?
ಕೇಂದ್ರ ಸರ್ಕಾರ ಅನಾಥ ಹಾಗೂ ನಿರ್ಗತಿಕ ಮಕ್ಕಳಿಗಾಗಿ ಆಯೋಜಿಸಿರುವ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ತಾವು ಸಹ ಒಂದು ಭಾಗವಾಗುವ ಅವಕಾಶ ಕಲ್ಪಿಸಿಕೊಟ್ಟ ರೌಂಡ್ ಟೇಬಲ್ಗೆ ಅಭಿನಂದನೆ ಸಲ್ಲಿಸುತ್ತೇವೆ. ಬಾನೆತ್ತರದಲ್ಲಿ ಹಾರಾಡುವ ವಿಮಾನದಲ್ಲಿ ತಾವು ಯಾವಾಗ ಪ್ರಯಾಣಿಸುವುದು ಎಂದು ಮಕ್ಕಳು ಸಹಜವಾಗಿ ಕನಸು ಕಾಣುತ್ತಾರೆ.
ಅವರ ಕನಸನ್ನು ನನಸಾಗಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಮಾಜಿ ಮೇಯರ್ ವೀರಣ್ಣ ಸವಡಿ ಹೇಳಿದರು. ಬೆಂಗಳೂರಿನ ನೆಹರು ಪ್ಲಾನೆಟ್, ವಿಧಾನಸೌಧ, ಹೈಕೋರ್ಟ್, ಕಬ್ಬನ್ ಪಾರ್ಕ್ ಸೇರಿ ಮತ್ತಿತರ ಪ್ರದೇಶಗಳಿಗೆ ಕೊಂಡೊಯ್ದು ವಿವಿಧ ರೀತಿಯ ತಿಳಿವಳಿಕೆ ನೀಡುವ ಈ ಕಾರ್ಯಕ್ರಮ ನಿಜಕ್ಕೂ ಅನಾಥ ಮಕ್ಕಳ ಬದುಕಿನಲ್ಲಿ ಆಶಾ ಭಾವನೆ ಮತ್ತಷ್ಟು ಹೆಚ್ಚಿಸಲಿದೆ ಎಂಬುದು ನಿಸ್ಸಂಶಯ ಎಂದರು. ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷತಿಪ್ಪಣ್ಣ ಮಜ್ಜಗಿ, ಉದ್ಯಮಿ ಡಾ.ಎಸ್ ವಿ. ಪ್ರಸಾದ ಇದ್ದರು.