ಬೆಂಗಳೂರು:- BMTC ಸಿಬ್ಬಂದಿ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಿನ್ನೆ ನಡೆದಿರುವ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. BMTC ಎಂಡಿ ರಾಮಚಂದ್ರನ್, ಪೊಲೀಸ್ ಆಯುಕ್ತರ ಭೇಟಿ ಮಾಡುತ್ತೇನೆ ಎಂದಿದ್ದಾರೆ.
ಡ್ರೈವರ್, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗುವ ರೀತಿಯಲ್ಲಿ ಮಾಡಬೇಕು. ಜೈಲಿಗೆ ಹೋಗುವ ರೀತಿ ಮಾಡಬೇಕು, ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಹೇಳಿದ್ದಾರೆ.
ಇನ್ನೂ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ