ಬೆಂಗಳೂರು:- ಇಡೀ ದೇಶದಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡಿತ್ತು. ಇದು ಸಿಎಂ ಸಿದ್ದರಾಮಯ್ಯರ ಕುರ್ಚಿಯನ್ನೇ ಅಲುಗಾಡುವಂತೆ ಮಾಡಿತ್ತು.
ಭ್ರಷ್ಠಾಚಾರದ “ಜಾಗೃತಿ ಅರಿವು ಸಪ್ತಾಹ-2024”: ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಬೋದಿಸಿದ ಸಿಎಂ!
ದೊಡ್ಡ ಹಗರಣ ಆಗಿರೋದ್ರಿಂದ ಇದು ಇಡಿ ಸುಪರ್ದಿಗೂ ಬಂದಿತ್ತು. ಹೀಗಾಗಿ ತನಿಖೆ ಚುರುಕು ಗೊಳಿಸಿರುವ ಇಡಿ ಇದೀಗ ಬೆಂಗಳೂರಿನಲ್ಲಿ ಬಿಲ್ಡರ್ ಮನೆಯಲ್ಲಿ ದಾಳಿ ಮಾಡಿ ಪರಿಶೀಲಿಸಿದೆ.
ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸುತ್ತಿದ್ದಾರೆ. ಮುಡಾ ಹಗರಣದ ಜಾಡು ಬೆಂಗಳೂರಿನವರೆಗೂ ವ್ಯಾಪಿಸಿದ್ದು, ಇಡಿ ಅಧಿಕಾರಿಗಳು ಇಲ್ಲಿನ ಜೆಪಿ ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಎಂಬುವರ ಮನೆ ಮೇಲೆ ದಾಳಿ ಮಾಡಿ, ದಾಖೆಗಳನ್ನು ಪರಿಶೀಲಿಸುತ್ತಿದ್ದಾರೆ.
ಮುಡಾಗು ಮತ್ತು ಬೆಂಗಳೂರಿನ ಬಿಲ್ಡರ್ ಎನ್.ಮಂಜುನಾಥ್ಗೂ ಏನು ಸಂಬಂಧ ಅಂತ ತನಿಖೆಗೆ ಇಳಿದ ಇಡಿ ಅಧಿಕಾರಿಗಳಿಗೆ ಹಲವು ವಿಚಾರಗಳು ತಿಳಿದುಬಂದಿವೆ. ಎನ್.ಕಾರ್ತಿಕ್ ಡೆವಲಪರ್ ಮಾಲೀಕನಾಗಿರುವ ಎನ್.ಮಂಜುನಾಥ್ ಮೈಸೂರಿನಲ್ಲಿ ಲೇಔಟ್ ನಿರ್ಮಾಣ ಮಾಡಿದ್ದರು. ಮೈಸೂರಿನಲ್ಲಿ ಕಾರ್ತಿಕ್ ಬಡಾವಣೆ ಹೆಸರಿನಲ್ಲಿ ಲೇಔಟ್ಗಳನ್ನು ನಿರ್ಮಾಣ ಮಾಡಿದ್ದರು. ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುತ್ತಿದ್ದ ವೇಳೆ, ಅಲ್ಲಿನ ಅಧಿಕಾರಿಗಳಿಗೆ ಲಂಚ ನೀಡಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಬಿಲ್ಡರ್ ಎನ್. ಮಂಜುನಾಥ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ಕೆಲ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಇಡಿ ಅಧಿಕಾರಿಗಳು ಎನ್. ಮಂಜುನಾಥ್ ಅವರ ಕಚೇರಿ, ಬ್ಯಾಂಕ್ ಖಾತೆ ಪರಿಶೀಲನೆಗೆ ತೆರಳಿದ್ದಾರೆ.
ಇಡಿ ಅಧಿಕಾರಿಗಳು ಅಕ್ಟೋಬರ್ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.
ಮುಡಾ ಅಧಿಕಾರಿಗಳು ನೀಡಿದ ದಾಖಲೆಗಳ ಆಧಾರದ ಮೇಲೆ ಇಡಿ ಅಧಿಕಾರಿಗಳು ಬಿಲ್ಡರ್ ಎನ್. ಮಂಜುನಾಥ್ ಅವರ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಇಡಿ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.