ತುಮಕೂರು: ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಗುಬ್ಬಿ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿ ವೀಕ್ಷಣೆ ಹಾಗೂ ಪಟ್ಟಣದ ರೈಲ್ವೆ ನಿಲ್ದಾಣದ ಲಘು ಮೇಲ್ಸೇತುವೆ ನಿರ್ಮಾಣದ ಬಗ್ಗೆ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಆಧಾರ್ ಕಾರ್ಡ್ʼನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಬಹುದು ಗೊತ್ತಾ..? ಇಲ್ಲಿದೆ ಮಾಹಿತಿ
ರಾಜಕೀಯಕ್ಕಿಂತ ಅಭಿವೃದ್ಧಿ ಮುಖ್ಯ. ಪಟ್ಟಣದ ಜನರ ಬಹು ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಹೇಳಿದರು. ಅಲ್ಲದೇ ರೈಲ್ವೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಸ್ತುತ ಯೋಜನೆಗೆ ಬದಲಾಗಿ ಮೇಲ್ಸೇತುವೆ ರಸ್ತೆಯನ್ನು 25 ಅಡಿಗಳಿಗೆ ವಿಸ್ತರಿಸುವಂತೆ ದೂರವಾಣಿ ಮೂಲಕ ನಿರ್ದೇಶನ ನೀಡಿದರು.
ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿಗೆ ಅಡೆತಡೆಯಾಗಿದ್ದ ಕೆಲವು ಸಮಸ್ಯೆಗಳನ್ನು ಬಗೆಹರಿಸಿರುವುದರಿಂದ ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು.