ಹುಬ್ಬಳ್ಳಿ: ಸಚಿವ ಸಂಪುಟ ಪುನಾರಚನೆ ವಿಷಯ ನನಗೇ ಗೊತ್ತೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಿಡಬ್ಲ್ಯೂಸಿ ಸಭೆಗಾಗಿ ದೆಹಲಿಗೆ ಹೋಗಿದ್ದಾರೆ. ಸಚಿವ ಸಂಪುಟ ಪುನಾರಚನೆ ಹೋಗಿದ್ದಲ್ಲ. ಈ ಕುರಿತು ಯಾವುದೇ ಚರ್ಚೆಗಳು ಆಗಿಲ್ಲ. ಸಚಿವ ಸಂಪುಟ ಪುನಾರಚನೆ ವಿಷಯ ನನಗೆ ಗೊತ್ತಿಲ್ಲ. ಈ ವಿಷಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಅದನ್ನು ನೋಡಿಕೊಳ್ಳುತ್ತಾರೆ ಎಂದರು.
ಸಿದ್ದು ಸಚಿವ ಸಂಪುಟ ಪುನರಾಚನೆ ಖಚಿತ : ಹೈಕಮಾಂಡ್ ಗೆ ಸಚಿವರ ರಿಪೋರ್ಟ್ ಕಾರ್ಡ್
ಇನ್ನೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಬೇಡಿಕೆಗಳ ಚರ್ಚೆಗಾಗಿಯೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಿರುವುದು. ಈ ಕುರಿತಾದ ವಿಸ್ತೃತ ಚರ್ಚೆಗೆ ವಿಪಕ್ಷಗಳು ಸಹಕಾರ ನೀಡಬೇಕು. ಈ ಭಾಗಕ್ಕೆ ಒತ್ತು ಕೊಡಬೇಕು ಎನ್ನುವ ಕಾರಣಕ್ಕಾಗಿಯೇ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಲಾಗಿದೆ. ಚಳಿಗಾಲದ ಅಧಿವೇಶನವನ್ನು ಇಲ್ಲಿಯೇ ಮಾಡಲಾಗುತ್ತಿದೆ. ಈ ಭಾಗದ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ವಿಪಕ್ಷದವರ ಸಹಕಾರ ಮುಖ್ಯ ಎಂದರು.