ಬೆಳಗಾವಿ: ಬೆಳಗಾವಿಯಲ್ಲಿ ಹಾಡು ಹಗಲೇ ಯುವಕನ ಬರ್ಬರ ಹತ್ಯೆಗೈಯ್ಯಲಾಗಿದೆ. ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ. ಸೋಹಿಲ್ ಅಹ್ಮದ್ ಕಿತ್ತೂರು (17) ಮೃತ ಯುವಕ. ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ ಸೋಹಿಕ್ ನನ್ನು ಚಾಕುವಿನಿಂದ ಎಲ್ಲೆಂದರಲ್ಲಿ ಇರಿದು ಕೊಲೆ ಮಾಡಲಾಗಿದೆ. ಐವರು ಯುವಕರು ಸೇರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿದ್ದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಲ್ ಕಟ್ಟಿ ಎಂದ ಕೆಇಬಿ ಸಿಬ್ಬಂದಿ ಮೇಲೆ ಹಲ್ಲೆ ಯತ್ನ : ವಿಡಿಯೋ ವೈರಲ್