ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಸುಮ (35 )ಆತ್ಮಹತ್ಯೆ ಗೆ ಶರಣಾದ ಮಹಿಳೆಯಾಗಿದ್ದು, ಶ್ರೀಯಾನ್ (6), ಚಾರ್ವಿ (1.5) ಸಾವನ್ನಪ್ಪಿದ ಮಕ್ಕಳಾಗಿದ್ದಾರೆ. ಕೊಡಿಗೇಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ದಂಪತಿ ಸುರೇಶ್ ಮತ್ತು ಕುಸುಮಾ ವಾಸವಾಗಿದ್ದರು.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನಮ್ಮ ಸಾವಿಗೆ ನಾವೇ ಕಾರಣವೆಂದು ಬರೆದಿದ್ದಾಳೆ. ಸದ್ಯ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.