ನೆಲಮಂಗಲ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ.
ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ನುಚ್ಚಾಗಿದೆ. ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ. ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.
Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?
ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಇನ್ನು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.