ಹುಬ್ಬಳ್ಳಿ: ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಒಣ ಮೆಣಸಿನಕಾಯಿ ಮೇಳ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ, ವರ್ತಕರು ಮೆಣಸಿನಕಾಯಿಗೆ ಬೇಕಾಬಿಟ್ಟಿ ದರ ನಿಗದಿ ಮಾಡಿದ್ದಕ್ಕೆ ನೆಲದ ಮೇಲೆ ಮೆಣಸಿನಕಾಯಿ ಸುರಿದು ಪ್ರತಿಭಟನೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಪಿಎಮ್ಸಿಯಲ್ಲಿ ನಡೆದಿದೆ.
ಒಂದು ಕ್ವಿಂಟಲ್ ಬ್ಯಾಡಗಿ ಮೆಣಸಿನಕಾಯಿಗೆ ಕೇವಲ 700 ದರ ನಿಗದಿ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ರೈತರು. ಬೇಕಿದ್ದರೆ ಬೆಂಕಿ ಹಚ್ಚಿ ಸುಡುತ್ತೇವೆ. ಆದ್ರೆ ಕಡಿಮೆ ದರಕ್ಕೆ ಮಾರಾಟ ಮಾಡಲ್ಲ ಎಂದು ಮೆಣಸಿನಕಾಯಿ ಕೆಳಗೆ ಸುರಿದು ವರ್ತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉದ್ದೇಶಪೂರ್ವಕವಾಗಿ ರೈತರನ್ನು ಶೋಷಿಸಲಾಗುತ್ತಿದೆ. ಬೇಕಾಬಿಟ್ಟಿ ದರ ಹಾಕುತ್ತಿರೋ ವರ್ತಕರ ಮೇಲೆ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದರು. ವಿಕೋಪಕ್ಕೆ ಹೋಗಿದ್ದ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಗಳ ಮಧ್ಯಪ್ರವೇಶದ ನಂತರ ಪರಿಸ್ಥಿತಿ ತಿಳಿಗೊಂಡಿದ್ದು, ಸೂಕ್ತ ಬೆಲೆ ಕೊಡುವುದಾಗಿ ವರ್ತಕರಿಂದ ಆಶ್ವಾಸನೆ ಕೊಡಿಸಿದರು.