ಬೆಂಗಳೂರು:- ಬಿ.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2025 ಆರಂಭಿಕ್ಕೆ ಕೌಂಟ್ ಡೌನ್: ಟ್ರೋಫಿ ಫೈನಲಿಸ್ಟ್ ಹೆಸರಿಸಿದ ರಿಕಿ ಪಾಂಟಿಂಗ್!
ಈ ಸಂಬಂಧ ಮಾತನಾಡಿದ ಅವರು, ಅವರು ಯಾಕೆ ರಾಜೀನಾಮೆ ಕೊಟ್ರು ಅಂತ ಗೊತ್ತಿಲ್ಲ. ಯಾಕೆ ರಾಜೀನಾಮೆ ಕೊಟ್ರು ಅಂತ ಸಿಎಂಗೆ ಹೇಳಿರುತ್ತಾರೆ. ಅವರಿಗೆ ಏನು ಅಸಮಾಧಾನ ಅಂತ ಗೊತ್ತಿಲ್ಲ. ರಾಜೀನಾಮೆ ಕೊಟ್ಟ ಬಗ್ಗೆಯೂ ಗೊತ್ತಿಲ್ಲ ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮಸೂದೆ ಬಗ್ಗೆ ಪ್ರತಿಕ್ರಿಯಿಸಿ, ಮಸೂದೆ ಮಾಡಿದ ಮೇಲೆ ಕೋರ್ಟ್ನಲ್ಲಿ ತಡೆ ಆಗಬಾರದು. ಈಗ ಇರುವ ಬೇರೆ ಬೇರೆ ಕಾನೂನುಗಳನ್ನು ಲಿಂಕ್ ಮಾಡಿ ಹೊಸ ಮಸೂದೆ ಮಾಡಲು ಅಧಿಕಾರಿಗಳಿಗೆ ಸಿಎಂ ಹೇಳಿದ್ದಾರೆ. ಆದಷ್ಟು ಬೇಗ ಮಸೂದೆಯ ಕರಡು ರಚನೆ ಮುಗಿದರೆ ರಾಜ್ಯಪಾಲರ ಒಪ್ಪಿಗೆಗೆ ಕಳಿಸಲಾಗುತ್ತದೆ ಎಂದರು.
ಈ ಬಾರಿಯ ಕೇಂದ್ರದ ಬಜೆಟ್ ಕರ್ನಾಟಕಕ್ಕೆ ನಿರಾಶೆ ತಂದಿದೆ. ಕರ್ನಾಟಕಕ್ಕೆ ಯಾವುದೇ ಕಾರ್ಯಕ್ರಮ ಕೊಟ್ಟಿಲ್ಲ. ಪ್ರಮುಖ ಬೇಡಿಕೆಗಳನ್ನು ಕೇಂದ್ರದ ಮುಂದೆ ಇಟ್ಟಿದ್ದೆವು. ಆಶ್ರಯ ಮನೆಗಳಿಗೆ ಹೆಚ್ಚಿನ ಹಣ ಕೇಳಿದ್ದೆವು. ಸಮಾಜ ಕಲ್ಯಾಣ ಇಲಾಖೆಗೆ ಇನ್ನೂ ಹೆಚ್ಚಿನ ಹಣ ಕೇಳಿದ್ದೆವು. ಕೇಂದ್ರದ ಯೋಜನೆಗಳಲ್ಲಿ ಹೆಚ್ಚಿನ ಅನುದಾನ ಕೇಳಿದ್ದೆವು. ಐಐಎಂ, ಐಐಟಿಗಳನ್ನು ರಾಜ್ಯಕ್ಕೆ ಕೊಡುವಂತೆ ಸಹ ಕೇಳಿದ್ದೆವು. ನೀರಾವರಿ ಯೋಜನೆಗಳಲ್ಲಿ ಭದ್ರ ಮೇಲ್ದಂಡೆಗೆ 5300 ಕೋಟಿ ರೂ. ಕೊಡೋದಾಗಿ ಕಳೆದ ಸಲ ಘೋಷಣೆ ಮಾಡಿದ್ದರು. ಈ ಸಲ ಅದರ ಪ್ರಸ್ತಾಪವೇ ಮಾಡಿಲ್ಲ ಎಂದು ಗುಡುಗಿದರು.
ಇದೇ ವೇಳೆ ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಅಶೋಕ್ ಯಾವಾಗ ಭವಿಷ್ಯ ಹೇಳೋದನ್ನ ಕಲಿತರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಿಲ್ಲ. ಅಂಥ ಯಾವುದೇ ಬೆಳವಣಿಗೆ ನಡೆದಿಲ್ಲ. ನಾವೆಲ್ಲ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರೆ ಅಂತ ಅಂದುಕೊಂಡಿದ್ದೇವೆ. ಸಿಎಲ್ಪಿ ಸಭೆಯಲ್ಲಿ ಸಿಎಂ ಆಯ್ಕೆ ಆಯ್ತು. ಆ ಸಂದರ್ಭದಲ್ಲಿ ಅವರು ಎರಡೂವರೆ ವರ್ಷ ಮಾತ್ರ ಇರುತ್ತಾರೆ ಎಂದು ನಮಗೇನೂ ಹೈಕಮಾಂಡ್ ಹೇಳಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಅಂದುಕೊಂಡಿದ್ದೇವೆ. ಈ ಮಧ್ಯೆ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.