ಸ್ಯಾಂಡಲ್ವುಡ್ ಸ್ಟಾರ್ ನಟ ಶಿವಣ್ಣ ಬರೋಬ್ಬರಿ 29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗೆಂದು ಅಮೆರಿಕಾಗೆ ಹೋಗಿ ಬಂದು ಸದ್ಯ ಕುಟುಂಬ ಸದಸ್ಯರ ಜೊತೆ ಸಮಯ ಕಳೆಯುತ್ತಿರುವ ಶಿವರಾಜ್ ಕುಮಾರ್ ಈ ಮಧ್ಯೆ ಯಾಣಾಗೆ ಭೇಟಿ ನೀಡಿದ್ದಾರೆ.
ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗಾಗಿ ಶಿವರಾಜ್ ಕುಮಾರ್ ಅಮೆರಿಕಾಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಅಮೆರಿಕಾದಲ್ಲಿದ್ದರು. ಇದೀಗ ಬೆಂಗಳೂರಿಗೆ ವಾಪಸ್ ಆಗಿರುವ ಶಿವರಾಜ್ ಕುಮಾರ್ ಪತ್ನಿ ಗೀತಾ ಜೊತೆಗೆ ಯಾಣಗೆ ತೆರಳಿದ್ದಾರೆ.
29 ವರ್ಷಗಳ ಹಿಂದೆ ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ಅಭಿನಯದ ನಮ್ಮೂರ ಮಂದಾರ ಹೂವೇ ಸಿನಿಮಾದ ಶೂಟಿಂಗ್ ಅನ್ನು ಯಾಣದಲ್ಲಿ ಮಾಡಲಾಗಿತ್ತು. ಇದೀಗ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿ ಪಟ್ಟಿದ್ದಾರೆ.
ಇನ್ನೂ, ನಟ ಯಾಣಕ್ಕೆ ಹೋಗಿರು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋ ಜೊತೆಗೆ ‘ಬಾಳಿನ ಬೆನ್ನು ಹತ್ತಿ.. ನೂರಾರು ಊರು ಸುತ್ತಿ.. ಏನೇನೋ ಕಂಡ ಮೇಲೂ.. ನಮ್ಮೂರೇ ನಮಗೆ ಮೇಲೂ..’ ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ ಅಂತ ಬರೆದುಕೊಂಡಿದ್ದಾರೆ.
ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ಫೋಟೋ ನೋಡಿದ ಅಭಿಮಾನಿಗಳು ಶಿವರಾಜ್ ಕುಮಾರ್ ಚೇತರಿಕೆ ಕಂಡ ಖುಷಿಯಾಗಿದ್ದಾರೆ.