ಆನೇಕಲ್:- ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದ್ದು, ಕೊಲೆ ಆರೋಪಿ ಕಾಲಿಗೆ ಗುಂಡಿನ ರುಚಿ ತೋರಿಸಿದ್ದಾರೆ.
ಫುಡ್ ತಡವಾಗಿ ಕೊಟ್ಟಿದ್ದನ್ನು ಪ್ರಶ್ನಿಸಿದ ಫುಡ್ ಡೆಲಿವರಿ ಬಾಯ್ ಮೇಲೆ ಹಲ್ಲೆ!
ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್ ನಡೆದಿದೆ. ಇನ್ಸ್ ಪೆಕ್ಟರ್ ನವೀನ್ ಕುಮಾರ್ ರಿಂದ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದೆ. ರೌಡಿ ಶೀಟರ್ ಶ್ರೀನಿವಾಸ್ @ ಗುಬ್ಬಚ್ಚಿ ಸೀನಾ ಕಾಲಿಗೆ ಗುಂಡೇಟು ಬಿದ್ದಿದೆ. ಮಾಜಿ ರೌಡಿ ಶೀಟರ್ ವೆಂಕಟೇಶ್ @ ವೆಂಕಿ ಕೊಲೆ ಮಾಡಿದ್ದ ಆರೋಪಿಗಳು.
ಕಳೆದ 28 ನೇ ತಾರೀಖಿನ ರಾತ್ರಿ ಶ್ರೀನಿವಾಸ್ @ ಗುಬ್ಬಚ್ಚಿ ಸೀನ ಗ್ಯಾಂಗ್ ಕೊಲೆ ಮಾಡಿದ್ದರು. ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಬೊಮ್ಮಸಂದ್ರದ ಬಳಿ ಅವಿತು ಕುಳಿತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ರೌಡಿ ಶೀಟರ್ ಶ್ರೀನಿವಾಸ್ @ ಗುಬ್ಬಚ್ಚಿ ಸೀನ ಬಂಧಿಸಿದ್ದಾರೆ.
ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಆರೋಪಿ ಸೀನ ಯತ್ನಿಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಇನ್ಸ್ ಪೆಕ್ಟರ್ ನವೀನ್ ತಿಳಿಸಿದ್ದಾರೆ. ಬಳಿಕ ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪೈರ್ ಇನ್ಸ್ ಪೆಕ್ಟರ್ ನವೀನ್ ಫೈರಿಂಗ್ ಮಾಡಿದ್ದಾರೆ.
ರೌಡಿ ಶೀಟರ್ ಶ್ರೀನಿವಾಸ್ @ ಗುಬ್ಬಚ್ಚಿ ಸೀನನ ಕಾಲಿಗೆ ಗುಂಡೇಟು ಹೊಡೆದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.