ಬೆಂಗಳೂರು:- ಒಂದೆಡೆ ಕರ್ನಾಟಕದಲ್ಲಿ ಫೈನಾನ್ಸ್ ಕಿರುಕುಳದ ಸುದ್ದಿ ಹೆಚ್ಚಾಗುತ್ತಿದ್ದಂತೆ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಸೂತಕದ ಛಾಯೆ: ಥಿನ್ನರ್ ಸೇವಿಸಿ ಬಾಲಕ ದುರ್ಮರಣ!
ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
6200 ಕೋಟಿ ರೂಪಾಯಿ ಸಾಲ ಕೊಡಬೇಕಿತ್ತು, ಅದರಲ್ಲಿ 14,000 ಕೋಟಿ ರೂ. ವಸೂಲಾಗಿದೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ರೂಪಾಯಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್ಗೆ ವಕೀಲ ಸಜನ್ ಪೂವಯ್ಯ ಮನವಿ ಮಾಡಿದರು.
ಅಲ್ಲದೇ ಹಣ ವಸೂಲಾತಿ ಪ್ರಕ್ರಿಯೆ ಮುಂದುವರಿದಿದ್ದು, ಪ್ರಾಥಮಿಕ ಸಾಲವನ್ನು ಪಾವತಿಸಲಾಗಿದೆಯೇ ಅಥವಾ ಇಲ್ಲವೇ ಎಂಬುವುದರ ಬಗ್ಗೆ ಯಾವುದೇ ಆದೇಶ ಮಾಡಲಾಗಿಲ್ಲ. ಆದ್ರೆ, ಸಾಲ ವಸೂಲಿ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ ಮಾಡಬೇಕು ಎಂದು ಮನವಿ ಮಾಡಿದರು.