ಬೆಂಗಳೂರು :ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್ ಡ್ರೈವರ್ ಪಾಲಿಗೆ ಮಾತ್ರ ಈ ಮಾತು ಅಕ್ಷರಶಃ ನಿಜವಾಗಿದೆ. ಕ್ಯಾಬ್ನಲ್ಲಿದ್ದ ಮೆಡಿಕವರ್ ಆಸ್ಪತ್ರೆಯ ಇಬ್ಬರು ವೈದ್ಯರು ದೇವರಾಗಿ ಆತನ ಪ್ರಾಣವನ್ನು ಉಳಿಸಿದ್ದಾರೆ.
ಹೌದು, ಉಬರ್ ಡ್ರೈವರ್ ಗೆ ಗಾಡಿ ಓಡಿಸುತ್ತಾ ಇರುವಾಗಲೇ ಮೂರ್ಛೆರೋಗ ಬಂದು ಗಾಡಿ ಓಡಿಸೋದಕ್ಕೆ ಆಗದೇ ನಿಯಂತ್ರಣ ತಪ್ಪಿ, ಲೈಟ್ ಕಂಬಕ್ಕೆ ಗುದ್ದಿದ್ದಾರೆ. ಈ ವೇಳೆ ಅದೇ ಕ್ಯಾಬ್ನಲ್ಲಿದ್ದ ಮೆಡಿಕವರ್ ಆಸ್ಪತ್ರೆಯ ವೈದ್ಯರಾದ ಡಾ. ರಾಜಸ್ವೆಲ್ವರಾಜನ್ ಹಾಗೂ ಡಾ. ರವೀಂದ್ರರವರ ಸಮಯ ಪ್ರಜ್ಷೆಯಿಂದ ಡ್ರೈವರ್ ಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿದ್ದು, ಆತನ ಪ್ರಾಣವನ್ನು ಉಳಿಸಿದ್ದಾರೆ.
ಮಧುಮೇಹಿಗಳೇ ಗಮನಿಸಿ: ತೆಂಗಿನ ಹಾಲು ಕುಡಿದ್ರೆ ಶುಗರ್ ಕಂಟ್ರೋಲ್ ಆಗುತ್ತಂತೆ!
ನಡೆದಿದ್ದೇನು..?
ವೈಟ್ಪೀಲ್ಡ್ನಲ್ಲಿರುವ ಮೆಡಿಕವರ್ ಆಸ್ಪತ್ರೆಯ ಹಿರಿಯ ಆರ್ಥೋಪೆಡಿಕ್ ಸರ್ಜನ್ ರವೀಂದ್ರ ಪುಟ್ಟಸ್ವಾಮಯ್ಯ ಹಾಗೂ ಹಿರಿಯ ಸಲಹೆಗಾರ ವೈದ್ಯ ಡಾ. ರಾಜ ಸ್ವೆಲ್ಪರಾಜನ್ ಗರುಡಾಚಾರ್ಯಪಾಳ್ಯದಿಂದ ಬೆಳಗ್ಗೆ 9.30ಕ್ಕೆ ಮೆಡಿಕವರ್ ಆಸ್ಪತ್ರೆಗೆ ಉಬರ್ ಬುಕ್ ಮಾಡಿಕೊಂಡು ಬರುತ್ತಾ ಇದ್ದರು. ಕಾರು ಹತ್ತಿದಾಗ ಇಬ್ಬರು ವೈದ್ಯರು, ಡ್ರೈವರ್ ಬಳಿ ಸಹಜ ಮಾತುಕತೆ ನಡೆಸುತ್ತಾ ಇದ್ದರು. ಸ್ವಲ್ಪ ಹೊತ್ತಿನ ಬಳಿಕ ಡ್ರೈವರ್ ಮಾತಾಡೋದನ್ನು ನಿಲ್ಲಿಸಿದರು. ಹಾಗೇ ಡ್ರೈವರ್ ಗೆ ಕಾರು ಓಡಿಸಲು ಸಾಧ್ಯವಾಗದೇ ಸಂಪೂರ್ಣ ಕಂಟ್ರೋಲ್ ತಪ್ಪಿ ಹೋಯಿತು. ಇದನ್ನು ಗಮನಿಸಿದ ವೈದ್ಯರು ಡ್ರೈವರ್ ಗೆ ಏನೋ ಸಮಸ್ಯೆಯಾಗ್ತಾಇದೆ ಎಂದುಕೊಂಡು, ಡ್ರೈವರ್ ಗೆ ಏನಾಯ್ತು ಎಂದು ಕೇಳುವಷ್ಟರಲ್ಲಿ, ಕಾರು ಮುಂದಕ್ಕೆ ಹೋಗುವ ಬದಲು, ರಸ್ತೆ ಬದಿಯಲ್ಲಿ ನಿಂತಿದ್ದ ಬೇರೆ ಕಾರಿಗೆ ಗುದ್ದಿಹೋಯ್ತು. ಅಲ್ಲದೇ ಅಲ್ಲೇ ಇದ್ದ ಲೈಟ್ ಕಂಬಕ್ಕೆ ಗುದ್ದಿ ಕಾರು ಹಿಂದಕ್ಕೆ ಬಂತು . ಅಷ್ಟು ಆಗುವಷ್ಟರಲ್ಲಿ ಕಾರಿನ ಹಿಂದೆ ಕೂತಿದ್ದ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಕಾರಿನ ಹ್ಯಾಂಡ್ ಬ್ರೇಕ್ ಹಾಕಿದರು. ಹೀಗಾಗಿ ಆಗಬೇಕಾದ ಆಪಾಯ ತಪ್ಪಿದೆ. ಅದೃಷ್ಟವಾಶಾತ್ಕಾರಿನಲ್ಲಿದ್ದ ಹಾಗೂ ಹೊರಗಡೆ ಗುದ್ದಿನ ಕಾರಿನವರಿಗಾಗಲೀ , ಪಾದಚಾರಿಗಾಗಲೀ ಯಾವುದೇ ಸಮಸ್ಯೆಯಾಗಿಲ್ಲ. ವೈದ್ಯರ ಸಮಯ ಪ್ರಜ್ಞೆಯಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.. ಡ್ರೈವರ್ ಗೆ ಅಷ್ಟರಲ್ಲಾಗಲೇ ಬಾಯಿಯಲ್ಲಿ ನೊರೆ ಬರೋದಕ್ಕೆ ಶುರುವಾಗಿ ಸಂಪೂರ್ಣವಾಗಿ ಮೂರ್ಛೆ ಹೋಗಿದ್ದರು. ಕೂಡಲೇ ಡಾ. ರಾಜಸ್ವೆಲ್ವರಾಜನ್ ಡ್ರೈವರ್ನ್ನು ಹಿಡಿದರು ಹಾಗೂ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಡ್ರೈವರನ್ನು ಕಾರಿನ ಹಿಂದೆ ಮಲಗಿಸಿ ಸೂಕ್ತ ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಿನ ಬಳಿಕ ಅಲ್ಲೇ ಇದ್ದು ಅವರನ್ನು ಸರಿಯಾದ ಚಿಕಿತ್ಸೆ ನೀಡಿ, ಯಾವೆಲ್ಲ ಔಷಧಿ ಕೊಡಬೇಕೆಂದು ಸಲಹೆ ಕೂಡ ನೀಡಿದರು. ಡ್ರೈವರ್ ಸ್ವಲ್ಪ ಸುಧಾರಿಸಿದ ನಂತರ ಕ್ಯಾಬ್ ಮಾಡಿಕೊಟ್ಟು, ಕೈಯಲ್ಲಿ ಸ್ವಲ್ಪ ದುಡ್ಡು ಕೊಟ್ಟು ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.