ಹುಬ್ಬಳ್ಳಿ: ಕಡಲೆಕಾಯಿ ಬಣವಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕಡಲೆ ಬಣವಿ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಹೊಲದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಭೀಮಪ್ಪ ಸುಂಕದ ಎಂಬಾತರಿಗೆ ಸೇರಿದ ಬಣವಿ ಇದಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕಡಲೆ ಬಣವಿ ಬೆಂಕಿಗೆ ಆಹುತಿಯಾಗಿದೆ. ಈ ದುಷ್ಕತೃ ಮೆರೆದೆ ಕಿಡಿಗೇಡಿಗಳು ಯಾರು ಎಂಬುದು ತಿಳಿದುಬಂದಿಲ್ಲ. ಇನ್ನೂ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಕಿಡಿಗೇಡಿಗಳಿಂದ ಅಪಾರ ಪ್ರಮಾಣದ ಕಡಲೆ ಹಾಳಾಗಿದ್ದು, ನಮಗೆ ಪರಿಹಾರ ಒದಗಿಸಿಕೊಡಬೇಕು ಹಾಗೂ ಇಂತಹ ಹೀನ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ಸಾಲ ಸೂಲಾ ಮಾಡಿ ಫಸಲು ಬೆಳೆದಿದ್ದೇವು ಆದರೆ ಎಲ್ಲಾ ಮಣ್ಣು ಪಾಲಾಗಿದೆ ಎಂದು ಭೀಮಪ್ಪ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.