ಮಂಡ್ಯ : ಅಪರಿಚಿತ ಕಾರು ಡಿಕ್ಕಿಯಾಗಿ ಪಾದಾಚಾರಿಗಳಿಬ್ಬರು ದುರ್ಮರಣಲಕ್ಕೀಡಾಗಿದ್ದಾರೆ. ಮಂಡ್ಯದ ಮದ್ದೂರಿನ ಮಣಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಮಣಿಗೆರೆ ಗ್ರಾಮದ ಮರಿಸ್ವಾಮಿ 52 ಹಾಗೂ ತಿಬ್ಬಯ್ಯ 60 ಮೃತ ದುರ್ದೈವಿಗಳು. ಕಳೆದ ಭಾನುವಾರ ರಾತ್ರಿ ಮದ್ದೂರು ಮಳವಳ್ಳಿ ರಸ್ತೆಯಲ್ಲಿಅವಘಡ ನಡೆದಿದ್ದು, ಅಪಘಾತದ ಬಳಿಕ ಇಬ್ಬರನ್ನು ಕೆಎಂ ದೊಡ್ಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮುಡಾ ಹಗರಣ ; ಸುಪ್ರೀಂಗೆ ಮೇಲ್ಮನವಿ ಅರ್ಜಿ ನಿರ್ಧಾರದಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ
ಇನ್ನೊಂದೆಡೆ ಕಾವೇರಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುಂಡ್ಲುಪೇಟೆಯ ಬಸಾಪುರ ಗ್ರಾಮದ ಪ್ರವೀಣ್ 22 ಮೃತ ಯುವಕ. ನಂಜನಗೂಡಿ ಟಿವಿಎಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್, ಬಲಮುರಿ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ.