ಬೆಂಗಳೂರು:- ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್ ಎಂದು DCM ಡಿಕೆಶಿ ಬಣ್ಣಿಸಿದ್ದಾರೆ.
ವೀಳ್ಯೆದೆಲೆ ಸಾಮಾನ್ಯವಲ್ಲ, ನಾನಾ ರೋಗಗಳಿಗೆ ರಾಮಬಾಣ: ಸೇವನೆ ಹೀಗಿರಲಿ!
ಏರ್ ಶೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 15ನೇ ಆವೃತ್ತಿಯ ಏರ್ ಶೋದಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್. ಇಲ್ಲಿ 1.5 ಲಕ್ಷ ಜನ ಏರ್ಫೋರ್ಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೈಮಾನಿಕ ಪ್ರದರ್ಶನ ಬರೀ ಪ್ರದರ್ಶನವಲ್ಲ, ನಮ್ಮ ಭದ್ರತಾ ಸಾಮರ್ಥ್ಯದ ಪ್ರದರ್ಶನ. ಇವತ್ತು ಬೆಂಗಳೂರು ಡಿಫೆನ್ಸ್ ಮತ್ತು ಮಾರುಕಟ್ಟೆಯನ್ನು ನಿರ್ವಹಿಸುವ ಏಕೈಕ ಕೇಂದ್ರವಾಗಿದೆ. ಇಂದು ಏರ್ಫೋರ್ಸ್ನಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಹೆಲಿಕಾಪ್ಟರ್ ತಯಾರಿಕೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ ಎಂದರು.
ಕರ್ನಾಟಕದಲ್ಲಿ ಇಂದು ಏರ್ ಕ್ರಾಫ್ಟ್ ಅಧ್ಯಯನಕ್ಕೆ ಸಂಬಂಧಿಸಿದ ಅನೇಕ ಇಂಜಿನಿಯರಿಂಗ್ ಕಾಲೇಜು ಹಾಗೂ ಸಂಸ್ಥೆಗಳಿವೆ. ಪ್ರತಿಭೆಗಳಿಗೆ ಕರ್ನಾಟಕ ಉತ್ತಮ ವೇದಿಕೆ ಒದಗಿಸುತ್ತಿದೆ. ಏರ್ ಶೋ ಎಲ್ಲರಿಗೂ ಒಂದು ಉತ್ತಮ ವೇದಿಕೆಯಾಗಲಿದೆ. ಏರ್ ಇಂಡಿಯಾ -2025ರ ಯಶಸ್ಸಿಗೆ ಕಾರಣವಾಗುತ್ತಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಶ್ಲಾಘಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.