ಹಾವೇರಿ:- ಹುಟ್ಟು ಸಾವು ಅನ್ನೋದು ಬ್ರಹ್ಮ ಲಿಖಿತ. ಇಲ್ಲಿ ದೇವರ ಅಪ್ಪಣೆ ಇಲ್ಲದೇ ನಾವು ಜನಿಸಲು ಸಾಧ್ಯವಿಲ್ಲ ಹಾಗೆಯೇ ಸಾಯಲು ಸಾಧ್ಯವಿಲ್ಲ. ಹಾಗೆಯೇ ಇಲ್ಲಿನ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.
ಏರೋ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ: DCP ಪರಿಶೀಲನೆ!
45 ವರ್ಷದ ಬಿಷ್ಟಪ್ಪ ಗುಡಿಮನಿ ಎಂಬವರು ಕಳೆದ ಮೂರು-ನಾಲ್ಕು ದಿನಗಳ ಹಿಂದೆ ಬಿಳಿ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಬಿಷ್ಟಪ್ಪ ಗುಡಿಮನಿ ಮೃತಪಟ್ಟಿದ್ದಾರೆ ಶವವನ್ನು ಊರಿಗೆ ತೆಗೆದುಕೊಂಡು ಹೋಗಿ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಕುಟುಂಬಸ್ಥರು ಮೃತ ಬಿಷ್ಟಪ್ಪ ಗುಡಿಮನಿ ಶವ ತೆಗೆದುಕೊಂಡು ಊರಿಗೆ ವಾಪಸು ಬರುತ್ತಿದ್ದ ವೇಳೆ, ದಾರಿಯಲ್ಲಿ ಅವರಿಗೆ ಇಷ್ಟವಾದ ಡಾಬಾ ಕಂಡಿದೆ. ಆಗ, ಕುಟುಂಬಸ್ಥರು ಡಾಬಾ ಬಂತು ನೋಡು, ಊಟ ಮಾಡುತ್ತೀಯಾ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತ ಬಿಷ್ಟಪ್ಪ ಗುಡಿಮನಿ ಉಸಿರಾಡಿದ್ದಾರೆ.
ಬಳಿಕ, ಬಿಷ್ಟಪ್ಪ ಗುಡಿಮನಿಗೆ ಶಿಗ್ಗಾಂವಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ