ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಬಿಎಂಆರ್ಸಿಎಲ್ ಪ್ರಯಾಣಿಕರ ಮೇಲೆ ಗದಾ ಪ್ರಹಾರ ಮಾಡಿದೆ. ದರ ಏರಿಕೆಯಿಂದ ಕಂಗೆಟ್ಟಿರೋ ಪ್ರಯಾಣಿಕರು ಬಿಎಂಆರ್ಸಿಎಲ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಂದೆಡೆ, ಮೆಟ್ರೋ ಪ್ರಯಾಣ ದರ ಏರಿಕೆ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇದೀಗ ಮೆಟ್ರೋ ದರ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆ ಮಾಡಲಾಗುತ್ತದೆ. ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಹೌದು ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಪತ್ರಿಕಾಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ದರ ಏರಿಕೆಗೆ ಪ್ರಯಾಣಿಕರ ವಿರೋಧ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದೆ.
Immunity Power: ಈ ಆಹಾರಗಳನ್ನು ತಿಂದ್ರೆ ಸಾಕು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತೆ..!
ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ. ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ ಮಾಡಿದ್ದೇವೆ. ಎಲ್ಲಿ ಅನಿವಾರ್ಯವೋ ಅಲ್ಲಿ ದರ ಮರ್ಜ್ ಮಾಡಬೇಕಾಗುತ್ತದೆ. ಎಲ್ಲೆಲ್ಲಿ (ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್ ಮಾಡುವ ಮೂಲಕ ದರ ಕಡಿಮೆಯಾಗುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಮೆಟ್ರೋಗೆ ಸಾಕಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ವೇತನ, ಇತ್ಯಾದಿ ವಿಚಾರಗಳನ್ನೂ ದರ ಏರಿಕೆ ವೇಳೆ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಮರ್ಜ್ ಮಾಡಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ ಎಂದು ಮಹೇಶ್ವರ್ ರಾವ್ ತಿಳಿಸಿದರು.
ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ 45 ರಿಂದ ಶೇ 50 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ ಎಂದು ಅವರು ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣ ದರವನ್ನು ಸ್ಟೇಜ್ ಆಧಾರದಲ್ಲಿ ಮರ್ಜ್ ಮಾಡುವ ಮೂಲಕ ಇಳಿಕೆ ಮಾಡಿ ಶೀಘ್ರದಲ್ಲೇ ವಿವರಗಳನ್ನು ಒದಗಿಸುತ್ತೇವೆ ಎಂದು ಅವರು ತಿಳಿಸಿದರು.