ಬೆಂಗಳೂರು:- ಕೆಂಪೇಗೌಡ ಏರ್ಪೋರ್ಟ್ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ಮೂವರನ್ನು ಬಂಧಿಸಿದ್ದಾರೆ.
ಸನಾತನ ಧರ್ಮ, ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸೋದು ಸಹಿಸಲ್ಲ: ಯೋಗಿ ಆದಿತ್ಯನಾಥ್!
ವಿಮಲ್ ರಾಜ್ ತುರೈ ಸಿಂಗಂ, ತಿಲೆಪನ್ ಜಯಂತಿ ಕುಮಾರ್, ವೀರ ಕುಮಾರ್ ಬಂಧಿತರು. ಬ್ಯಾಗ್ನಲ್ಲಿಟ್ಟು ಹಣ ಸಾಗಿಸುವಾಗಿ ಆರೋಪಿಗಳು ಸಿಕ್ಕಿಬಿದಿದ್ದಾರೆ.
ಪ್ರಯಾಣಿಕರ ಲಗೇಜ್ ಬ್ಯಾಗ್ನಲ್ಲಿ ಹಣವಿಟ್ಟುಕೊಂಡು ಮೂವರು ಆರೋಪಿಗಳು ಹೋಗುತ್ತಿದ್ದರು. ಕೆಐಎಬಿಯಲ್ಲಿ ಇಮಿಗ್ರೇಷನ್ ಚೆಕ್ಕಿಂಗ್ ವೇಳೆ ಕಂತೆ ಕಂತೆ ಹಣ ಪತ್ತೆ ಆಗಿದೆ. ಹಣ ಕಂಡ ಏರ್ಪೋಟ್ ಭದ್ರತಾ ಪಡೆ ಐಟಿ ಮತ್ತು ಇಡಿ ಅಧಿಕಾರಿಗಳಿಗೆ ಹಣ ಸಮೇತ ಆರೋಪಿಗಳನ್ನ ಒಪ್ಪಿಸಿದ್ದಾರೆ.