ಚಾಮರಾಜನಗರ:- ಜಿಲ್ಲೆಯಲ್ಲಿ ನೆಲೆಸಿರುವ ಪವಾಡ ಪುರುಷ ಮಹದೇಶ್ವರ ಮತ್ತೆ ಕೋಟಿ ಒಡೆಯನಾಗಿದ್ದಾನೆ.
ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ ನಡೆಸಲಾಯಿತು. ಕಳೆದ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂಪಾಯಿ ಭಕ್ತರಿಂದ ಕಾಣಿಕೆ ರೂಪದಲ್ಲಿ ಹರಿದುಬಂದಿದೆ. ನಗದು ಹಣದ ಜೊತೆಗೆ 63 ಗ್ರಾಂ ಚಿನ್ನ ಹಾಗೂ ಒಂದು ಕೆಜಿ 510 ಗ್ರಾಂ ಬೆಳ್ಳಿಯ ಆಭರಣಗಳನ್ನು ಸಹ ಭಕ್ತರು ಮಲೆ ಮಹದೇಶ್ವರನಿಗೆ ಸಮರ್ಪಿಸಿದ್ದಾರೆ. 11 ವಿದೇಶಿ ನೋಟು, 2000 ಮುಖಬೆಲೆಯ ನೋಟುಗಳನ್ನು ಕೂಡ ಭಕ್ತರು ಸಮರ್ಪಿಸಿದ್ದಾರೆ.