ಬೆಂಗಳೂರು: ವಿವಿಗಳನ್ನು ಮುಚ್ಚುವ ಸರ್ಕಾರದ ತೀರ್ಮಾನ ಅವೈಜ್ಞಾನಿಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಂದಿನ 5 ವರ್ಷಗಳಲ್ಲಿ 350 ಕೋಟಿ ರೂ. ಹಣಕಾಸು ಕೊಡಲು ಸಾಧ್ಯವಿಲ್ಲದ ಕಾರಣ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರದ ಕ್ಯಾಬಿನೆಟ್ ಉಪ ಸಮಿತಿ ಕೊಟ್ಟ ವರದಿಯು ವಿವಿಗಳನ್ನು ಮುಚ್ಚುವ ಸರ್ಕಾರದ ತೀರ್ಮಾನ ಅವೈಜ್ಞಾನಿಕ.
ನಿಮಗೆ ಗೊತ್ತೆ..? ಈ ವ್ಯಾಯಾಮಗಳನ್ನ ಮಾಡಿದ್ರೆ ಸಾಕು ಶುಗರ್ ಕಂಟ್ರೋಲ್ಗೆ ಬರುತ್ತಂತೆ..!
ಇದು ಅವಿವೇಕತನದ ನಿರ್ಧಾರ ಎಂದು ವಾಗ್ದಾಳಿ ನಡೆಸಿದರು.ಇದರ ವಿರುದ್ಧ ರಾಜಕೀಯೇತರ ನೆಲೆಯಿಂದ ಹೋರಾಟ ಮಾಡಬೇಕಿದೆ. ವಿದ್ಯಾರ್ಥಿ ಪರಿಷತ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಿಜೆಪಿ ಕೂಡ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಡಲಿದೆ. ದೊಡ್ಡ ಮಟ್ಟದ ಹೋರಾಟ ಮಾಡಲಿದ್ದೇವೆ.
ಒಂದು ಜಿಲ್ಲೆ ಒಂದು ವಿವಿ ಪರಿಕಲ್ಪನೆಯಡಿ ಈ ವಿವಿಗಳನ್ನು ರಚಿಸಲಾಗಿದೆ. ಹಣಕಾಸಿನ ಬಿಕ್ಕಟ್ಟನ್ನೇ ಆಧಾರವಾಗಿ ಇಟ್ಟುಕೊಂಡು ರಾಜ್ಯ ಸರ್ಕಾರ ಅವಿವೇಕತನದ ನಿರ್ಧಾರ ತೆಗೆದುಕೊಳ್ಳಬಾರದು. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.