ಚಿತ್ರದುರ್ಗ: ಬೆಳಗಾವಿಯಲ್ಲಿ ಕರ್ನಾಟಕದ ಸರ್ಕಾರಿ ಬಸ್ ನಿರ್ವಾಹಕರ ಮೇಲಿನ ಹಲ್ಲೆ ಖಂಡಿಸಿ ಐಮಂಗಲ ಟೋಲ್ ಬಳಿ ಮಹಾರಾಷ್ಟ್ರ ಬಸ್ ಗೆ ಕಪ್ಪು ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರ್ನಾಟಕ ಬಸ್ ನಿರ್ವಾಹಕರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸದಸ್ಯರು ಹಲ್ಲೆ ಮಾಡಿದ್ದನ್ನ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಹೋರಾಟ ನಡೆಸಲಾಯಿತು.
ಕಳೆದ ಶುಕ್ರವಾರ ರಾತ್ರಿ ಐಮಂಗಲ ಬಳಿಯ ಗುಯಿಲಾಳು ಟೋಲ್ ಬಳಿ ನವ ನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷರಾದ ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್ ನ ಮೇಲೆ ಕಪ್ಪು ಮಸಿ ಬಳಿದು ಚಾಲಕನಿಗೆ ಕೂಡ ಮಸಿ ಬಳಿದು ಜೈ ಕರ್ನಾಟಕ ಜೈ ಕನ್ನಡ ಎಂದು ಬರೆದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ. ಈ ವೇಳೆ ಹಿರಿಯೂರು ತಾಲ್ಲೂಕಿನ ಅಧ್ಯಕ್ಷರಾದ ಲಕ್ಷ್ನಿಕಾಂತ್, ವಿಧ್ಯಾರ್ಥಿ ಘಟಕದ ಮಂಜುನಾಥ್ ಹಾಗೂ ನಗರಾಧ್ಯಕ್ಷ ರಾಮು ಸೇರಿದಂತೆ ಅನೇಕರು ಹಾಜರಿದ್ದರು.