ಉತ್ತರಕನ್ನಡ : ಹತ್ತು ವರ್ಷದಿಂದ ಪ್ರೀತಿಸುತದ್ದ ಹುಡುಗಿ ಕೈಕೊಟ್ಟ ಸಿಟ್ಟಿಗೆ ಆಕೆಯ ಗಂಡನನ್ನೇ ಬಸ್ ನಲ್ಲಿ ಪಾಗಲ್ ಪ್ರೇಮಿ ಚಾಕು ಇರಿದು ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದ ಸಮೀಪ ಬೆಂಗಳೂರಿಗೆ ಸಂಚರಿಸುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಘಟನೆ ನಡೆದಿದೆ.
ಸಾಗರ ತಾಲೂಕಿನ ನೀಚಡಿಯ ಗಂಗಾಧರ್ ಹತ್ಯೆಯಾಗಿದ್ದು , ಪ್ರೀತಮ್ ಡಿಸೋಜ ಚಾಕು ಇರಿದು ಪರಾರಿಯಾಗಿದ್ದಾನೆ. ಕಳೆದ ಹತ್ತು ವರ್ಷದಿಂದ ಶಿರಸಿಯ ಪೂಜಾಳನ್ನು ಪ್ರೀತಮ್ ಡಿಸೋಜ ಪ್ರೀತಿಸುತಿದ್ದ .ಆಕೆಯೂ ಈತನನ್ನು ಪ್ರೀತಿಸುತ್ತಿದ್ದಳು. ಆದರೇ ಕೆಲಸಕ್ಕಾಗಿ ಬೆಂಗಳೂರಿಗೆ ಹೋದ ಪೂಜಾ ಅಲ್ಲಿ ಪರಿಚಯವಾದ ಸಾಗರದ ಗಂಗಾಧರ್ ನನ್ನು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದಳು.
ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಬರ್ಬರ ಕೊಲೆ: ಬೆಂಗಳೂರಲ್ಲಿ ತಡರಾತ್ರಿ ಕೃತ್ಯ!
ಪತ್ನಿಯ ಸಂಬಂಧಿಕರ ಕಾರ್ಯಕ್ರಮಕ್ಕೆ ಪತ್ನಿಯೊಂದಿಗೆ ಬಂದಿದ್ದ ಗಂಗಾಧರ್ ಇಂದು ರಾತ್ರಿ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಸ್ ನಿಲ್ದಾಣದಿಂದ ತೆರಳುತ್ತಿದ್ದು, ಪ್ರೀತಮ್ ಕೂಡ ಬಸ್ ಗೆ ಹತ್ತಿದ್ದು ಏಕಾಏಕಿ ಗಂಗಾಧರ್ ನೊಂದಿಗೆ ಜಗಳ ತೆಗೆದು ಆತನ ಹೃದಯದ ಭಾಗಕ್ಕೆ ಚುಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಗಂಗಾಧರ್ ಪತ್ನಿ ಪೂಜಾಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದರು. ಆ ಬಳಿಕ ತಾನೇ ಬಂದು ಪೊಲೀಸರ ಎದುರು ಶರಣಾಗಿದ್ದಾನೆ.