ಬೆಂಗಳೂರು: ಪರಾಜಿತ ಅಭ್ಯರ್ಥಿಗಳು ಸುಮ್ಮನೆ ಕೂರದೇ ಕಾರ್ಯಪ್ರವೃತ್ತರಾಗಬೇಕು ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ನಾವು ಸೋತಿದ್ದ 86 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕರೆಸಿ ಅವರ ಕಷ್ಟ ಆಲಿಸಿ,
ಮುಂದಿನ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಪರಾಜಿತ ಅಭ್ಯರ್ಥಿಗಳು ಸುಮ್ಮನೆ ಕೂರದೇ ಕಾರ್ಯಪ್ರವೃತ್ತರಾಗಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದರು.
ಚಾಣಕ್ಯನ ಪ್ರಕಾರ ಹೆಂಡತಿ ತನ್ನ ಗಂಡನ ಈ ಕೆಟ್ಟ ಅಭ್ಯಾಸಗಳನ್ನು ಮುಚ್ಚಿಡಬಾರದು..!
ಎಐಸಿಸಿ (AICC) ಜತೆ ಚರ್ಚೆ ಮಾಡಿ ಪಕ್ಷಕ್ಕೆ ಹಿನ್ನಡೆ ಇರುವ ಉಳಿದ 20 ಕ್ಷೇತ್ರಗಳಲ್ಲಿ ಪಕ್ಷವನ್ನು ಯಾವ ರೀತಿ ಕಟ್ಟಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದವರು ಹಾಗೂ ಸೋತವರನ್ನು ಮತ್ತೊಂದು ದಿನ ಕರೆದು ಸಭೆ ಮಾಡಲಿದ್ದೇನೆ.
ಚುನಾವಣೆಯಲ್ಲಿ ಸೋತ ನಂತರ ಇವರು ಲೋಕಸಭೆ ಚುನಾವಣೆ, ಸಹಕಾರಿ ಸಂಘಗಳ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಶಕ್ತಿ ತುಂಬಲು ಸಲಹೆ ನೀಡಲಾಗಿದೆ. ಮುಂದಿನ ಅಧಿವೇಶನ ನಡೆಯುವಾಗ ನಾನು ಹಾಗೂ ಮುಖ್ಯಮಂತ್ರಿಗಳು ಪರಾಜಿತ ಅಭ್ಯರ್ಥಿಗಳನ್ನು ಕರೆಸಿ ಚರ್ಚೆ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದಿದ್ದಾರೆ.