ತುಮಕೂರು : ಮನೆಯ ಮುಂದಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ತೊರೆಮಾವಿನಹಳ್ಳದಲ್ಲಿ ಘಟನೆ ನಡೆದಿದೆ.
ತೊರೆಮಾವಿನಹಳ್ಳಿ ಶಂಕರಲಿಂಗಯ್ಯ ಎಂಬುವರ ಮನೆಯಂಗಳಕ್ಕೆ ಚಿರತೆ ಬಂದಿದ್ದು, ಚಿರತೆಯು ನಾಯಿಯನ್ನು ಹೊತ್ತೊಯ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನು ಕೆಲ ದಿನಗಳಿಂದ ತೊರೆಮಾವಿನಹಳ್ಳಿ ಸುತ್ತ ಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ. ಇದೀಘ ತಡರಾತ್ರಿ ಮನೆಯ ಅವರಣಕ್ಕೆ ನುಗ್ಗಿ ಸಾಕು ನಾಯಿಯನ್ನ ಎಳೆದೊಯ್ದಿದ್ದು, ಚಿರತೆ ಓಡಾಟ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ರಾತ್ರಿ ವೇಳೆ ಮನೆಯಿಂದ ಹೊರ ಬರಲು ಗ್ರಾಮಸ್ಥರು ಭಯಪಡುವಂತಾಗಿದೆ. ಹೀಗಾಗಿ ಕೂಡಲೇ ಚಿರತೆಯನ್ನು ಸೆರೆಯಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..